Advertisement

Fraud: ಹೈಕೋರ್ಟ್‌ ಜಡ್ಜ್ ಗಳಿಗೇ ಸೈಬರ್‌ ವಂಚನೆಗೆ ಯತ್ನ

10:21 AM Mar 24, 2024 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿ ನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದಲ್ಲದೆ, ನೀವು ಬಳಸು ತ್ತಿರುವ ಸಿಮ್‌ ಕಾರ್ಡ್‌ಗಳಿಂದ ಕಾನೂನು ಬಾಹಿರ ಜಾಹೀರಾತುಗಳು ಹಾಗೂ ಆಕ್ಷೇಪಾರ್ಹ ಸಂದೇಶ ಗಳನ್ನು ಹಾಕುತ್ತಿದ್ದಿರಿ ಎಂದು ಬ್ಲ್ಯಾಕ್‌ವೆುàಲ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಈ ಸಂಬಂಧ ಇಬ್ಬರು ನ್ಯಾಯಾಧೀಶರ ನಿರ್ದೇಶನದ ಮೇರೆಗೆ ಹೈಕೋರ್ಟ್‌ ಭದ್ರತಾ ಪೊಲೀಸ್‌ ಅಧಿಕಾರಿಗಳು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಹೈಕೋರ್ಟ್‌ ಭದ್ರತಾ ಇನ್‌ಸ್ಪೆಕ್ಟರ್‌ ಜಿ.ಶೋಭಾ ಮತ್ತು ಸಬ್‌ಇನ್‌ಸ್ಪೆಕ್ಟರ್‌ ಎ.ಆರ್‌.ರಘುನಾಯ್ಕ ನೀಡಿದ ದೂರಿನ ಮೇರೆಗೆ 2 ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಾ.15ರಂದು ಸಂಜೆ 4 ಗಂಟೆಗೆ ಹೈಕೋರ್ಟ್‌ ನ್ಯಾಯಮೂರ್ತಿ ಅವರಿಗೆ ಅಪರಿಚಿತನೊಬ್ಬ ತಾವು ಡಿಒಪಿಟಿ ಇಲಾಖೆಯಿಂದ ಕರೆ ಮಾಡುತ್ತಿದ್ದು, ತಾವು ಬಳಸುತ್ತಿರುವ ಸಿಮ್‌ ಕಾರ್ಡ್‌ನಿಂದ ಕಾನೂನು ಬಾಹಿರವಾಗಿ ಜಾಹೀರಾತು ಹಾಗೂ ಆಪೇûಾರ್ಹ ಮೆಸೇಜ್‌ ಹಾಕುತ್ತಿದ್ದೀರಾ. ಅದರಿಂದ ನಿಮ್ಮ ಮೇಲೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ ಎಂದಿದ್ದಾನೆ. ಬಳಿಕ ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಆ ವ್ಯಕ್ತಿ, ಏರು ಧ್ವನಿಯಲ್ಲಿ ನ್ಯಾಯಮೂರ್ತಿಗಳಿಗೆ ಮಾತನಾಡಿದ್ದು, ನ್ಯಾಯ ಮೂರ್ತಿಗಳು ಕರೆಯನ್ನು ಸ್ಥಗಿತಗೊಳಿಸಿದ್ದಾರೆ.

ನಂತರ ಹೈಕೋರ್ಟ್‌ ಭದ್ರತಾ ಸಿಬ್ಬಂದಿಗೆ ಕರೆದು, ಇದೊಂದು ವ್ಯವಸ್ಥಿತವಾಗಿ ಸಂಚು ರೂಪಿಸಿಕೊಂಡು ಬೆದರಿಕೆ ಹಾಕಿ ಹಣ ಪಡೆದು ಮೋಸ ಮಾಡುವ ಗುಂಪು ಇರಬಹುದು. ಈ ಸಂಬಂಧ ದೂರು ನೀಡಲು ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪಿಐ ಶೋಭಾ ಅವರು ದೂರು ನೀಡಿದ್ದಾರೆ.

Advertisement

ಮತ್ತೂಂದು ಪ್ರಕರಣದಲ್ಲಿ ಮಾ.15ರ ಬೆಳಗ್ಗೆ 9 ಗಂಟೆಗೆ ಹೈಕೋರ್ಟ್‌ ಮತ್ತೂಬ್ಬ ನ್ಯಾಯಮೂರ್ತಿ ಅವರಿಗೆ ಕರೆ ಮಾಡಿರುವ ಅಪರಿಚಿತನೊಬ್ಬ ತಾವು ಡಿಒಪಿಟಿ ಇಲಾಖೆಯಿಂದ ಕರೆ ಮಾಡುತ್ತಿದ್ದು, ತಾವು ಬಳಸುತ್ತಿರುವ ಸಿಮ್‌ ಕಾರ್ಡ್‌ನಿಂದ ಕಾನೂನು ಬಾಹಿರವಾಗಿ ಜಾಹೀರಾತು ಹಾಗೂ ಆಪೇûಾರ್ಹ ಮೆಸೇಜ್‌ ಹಾಕುತ್ತಿದ್ದೀರಾ. ಅದರಿಂದ ನಿಮ್ಮ ಮೇಲೆ ಮುಂಬೈನ ಅಂದೇರಿ ಈಸ್ಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ. ಅವರ ಜತೆ ಮಾತನಾಡಿ ನಿಮ್ಮ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಕರೆಯನ್ನು ಇನ್ನೊಬ್ಬನಿಗೆ ವರ್ಗಾವಣೆ ಮಾಡಿದ್ದಾನೆ. ಆ ವ್ಯಕ್ತಿ ತನ್ನನ್ನು ಪೊಲೀಸ್‌ ಎಂದು ಹೇಳಿಕೊಂಡು ಏರು ಧ್ವನಿಯಲ್ಲಿ ಮಾತನಾಡಿ, ನೀವು ದುಡ್ಡು ಕೊಟ್ಟರೆ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾನೆ. ನಂತರ ನ್ಯಾಯಮೂರ್ತಿಗಳು ಕರೆಯನ್ನು ಸ್ಥಗಿತಗೊಳಿ ಸಿದ್ದಾರೆ. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳುವಂತೆ ನ್ಯಾಯಮೂರ್ತಿಗಳು ಪಿಎಸ್‌ಐ ಎ.ಆರ್‌.ರಘುನಾಯ್ಕಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next