Advertisement

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಮೂವರು ಮಕ್ಕಳ ಸಾವು; ತಾಯಿ ಗಂಭೀರ

06:49 PM Jul 04, 2020 | Sriram |

ಬನಹಟ್ಟಿ : ಒಂದೇ ಕುಟುಂಬದ ಮೂವರು ಮಕ್ಕಳೊಂದಿಗೆ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಸಮೀಪದ ಜಗದಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.

Advertisement

ಈ ಘಟನೆಯಲ್ಲಿ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತು ತಾಯಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ. ಈ ಘಟನೆ ಬನಹಟ್ಟಿ ಪೋಲಿಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದೆರಡು ವರ್ಷಗಳ ಹಿಂದೆ ಪತಿ ಚಿಕ್ಕಯ್ಯ ದಾನಯ್ಯ ಮಠದ ಬಂಡಿಗಣಿಯ ಹೊರವಲಯದಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿದ್ದರು.  ವೈಯಕ್ತಿಕ ಕಾರಣದಿಂದ ಮನನೊಂದ ಭಾಗ್ಯಶ್ರೀ ಚಿಕ್ಕಯ್ಯ ಮಠದ(32) ತನ್ನ ಮಕ್ಕಳಾದ ಶಿವಾನಿ(12), ಶಿವಶಂಕರ(10), ಶಿವಶ್ರೀ(9) ಈ ಮೂವರಿಗೂ ವಿಷ ಉಣಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿದು ಬಂದಿದೆ.

ಘಟನೆ: ಶನಿವಾರ ಬೆಳಿಗ್ಗೆ 6.30 ರ ಸುಮಾರಿಗೆ ತಮ್ಮ ತೋಟದ ಮನೆಯಿಂದ ಜಗದಾಳ ಗ್ರಾಮದ ಹತ್ತಿರದ ದುರ್ಗಾದೇವಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ 10 ಗಂಟೆಯಾದರೂ ಮನೆಗೆ ವಾಪಸ್ ಬಾರದೆ ಇದ್ದಾಗ, ಮನೆಯವರು ಹುಡುಕಾಟ ನಡೆಸಿದ ನಂತರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾಗ್ಯಶ್ರೀ ತೀವ್ರ ಅಸ್ವಸ್ಥದಿಂದ ಬಳಲುತ್ತಿದ್ದರೆ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದವು.

ಮನೆಯಿಂದ ಬರುವಾಗ ಕುಡಿಯುವ ನೀರಿನಲ್ಲಿ ಉಣ್ಣೆಗೆ ಸಿಂಪಡಿಸುವ ಔಷಧಿಯನ್ನು ಮಿಶ್ರಣಗೊಳಿಸಿ ಮಕ್ಕಳಿಗೆ ನೀಡಿದ್ದಲ್ಲದೆ ತಾನೂ ಸಹ ಕುಡಿದಿರುವುದಾಗಿ ಮೆಲ್ನೋಟಕ್ಕೆ ಕಂಡು ಬಂದ ವಿಷಯವಾಗಿದೆ.

Advertisement

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಸಂಜೆಯವರೆಗೂ ಪ್ರಕರಣ ದಾಖಲಾಗಿರಲಿಲ್ಲ. ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ ಮತ್ತು ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next