Advertisement

ಸಿದ್ದಕಟ್ಟೆ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ ಯತ್ನ

02:05 PM Feb 18, 2022 | Team Udayavani |

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ಸಂಭವಿಸಿದ್ದು, ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಕಳ್ಳರು ಸಂಘದ ಬಾಗಿಲ ಶಟರ್ ಮುರಿದ ಬಗ್ಗೆ ಬೆಳಗ್ಗೆ ಸಂಘದ ಸಮೀಪದ ಅಂಗಡಿಯವರ ಗಮನಕ್ಕೆ ಬಂದಿದ್ದು, ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಮಾಹಿತಿ ನೀಡಿದ್ದರು. ಘಟನೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಪಿಕ್ಕಾಸು ಬಳಸಿ ಸಂಘದ ಶಟರ್ ಬಗ್ಗಿಸಿ, ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಪಾಟು, ಕ್ಯಾಶ್ ಕೌಂಟರ್‌ಡ್ರಾಯರನ್ನು ಜಾಲಾಡಿದ್ದಾರೆ. ಆದರೆ ಸೇಫ್ ಲಾಕರ್ ತೆರೆಯಲಾಗದೇ, ಯಾವುದೇ ಚಿನ್ನ, ಹಣ, ಬೆಲೆ ಬಾಳುವ ವಸ್ತು ದೊರಕದೇ ವಾಪಾಸು ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್‌ಐ.ಹರೀಶ್, ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್‌ಐ.ಸಂಜೀವ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next