Advertisement

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

12:18 AM Apr 14, 2024 | Team Udayavani |

ಮಡಿಕೇರಿ: ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲದಲ್ಲಿ ಶನಿವಾರ ಸಂಭವಿಸಿದೆ.

Advertisement

ನೆಲ್ಯಹುದಿಕೇರಿಯ ಎಂ.ಜಿ. ಕಾಲನಿ ನಿವಾಸಿ ರಂಶಾದ್‌ ಹಾಗೂ ರಾಶೀದ್‌ ಅವರು ಅರೆಕಾಡಿಗೆ ತೆರಳುತ್ತಿದ್ದ ಸಂದರ್ಭ ಅತ್ತಿಮಂಗಲ ತಲುಪುತ್ತಿದ್ದಂತೆ ಕಾಫಿ ತೋಟದಿಂದ ರಸ್ತೆಗೆ ಬಂದ ಕಾಡಾನೆ ಬೈಕಿನ ಮೇಲೆ ದಾಳಿ ಮಾಡಿತು.

ರಂಶಾದ್‌ ಅವರ ಹೊಟ್ಟೆ ಹಾಗೂ ಕಾಲಿಗೆ ಗಾಯವಾಗಿದ್ದು, ಸಹೋದರ ರಾಶಿದ್‌ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಗಾಯಾ ವನ್ನು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಡಿಆರ್‌ಎಫ್ಒ ಸುಬ್ರಾಯ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಈ ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಳೆದ ಹಲವು ದಿನಗಳಿಂದ ದಾಂಧಲೆ ನಡೆಸುತ್ತಿವೆ. ವಾಹನ ಸವಾರರ ಮೇಲೆ ಹಲವು ಬಾರಿ ದಾಳಿಗೆ ಯತ್ನಿಸಿದೆ. ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next