Advertisement

ಸರ್ಕಾರಗಳ ಸಾಧನೆಯೊಂದಿಗೆ ಜನರನ್ನು ಆಕರ್ಷಿಸಿ; ಸಿ.ವಿ. ಚಂದ್ರಶೇಖರ

06:17 PM Feb 04, 2023 | Team Udayavani |

ಕೊಪ್ಪಳ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಧನೆಯೊಂದಿಗೆ ಬಿಜೆಪಿ ಕಾರ್ಯಕರ್ತರು ಜನರನ್ನು ಪಕ್ಷಕ್ಕೆ ಆಕರ್ಷಿಸಬೇಕು ಎಂದು ಬಿಜೆಪಿ ಮುಖಂಡ ಸಿ.ವಿ. ಚಂದ್ರಶೇಖರ ಹೇಳಿದರು.

Advertisement

ಭಾಗ್ಯನಗರದ 12ನೇ ವಾರ್ಡ್‌ನ ಮಾರುತೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬಿಜೆಪಿ ಗ್ರಾಮೀಣ ಮಂಡಲದಿಂದ ನಡೆದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಸರ್ಕಾರವು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಡಬಲ್‌ ಇಂಜಿನ್‌ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ತೆರಳಿ, ಆಶೀರ್ವಾದ ಮಾಡುವಂತೆ ಮನವೊಲಿಸಬೇಕು. ಈ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಬೇಕು. ಇದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರವೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಸರ್ಕಾರಗಳ ಸಾಧನೆಗಳನ್ನು ಮನವರಿಕೆ ಮಾಡಿದರು. ಬಿಜೆಪಿ ಮುಖಂಡರಾದ ಚಂದ್ರಶೇಖರ್‌ ಕವಲೂರ, ಚಂದ್ರಶೇಖರ್‌ ಪಾಟೀಲ್‌ ಹಲಗೇರಿ, ಭಾಗ್ಯನಗರದ ಬಿಜೆಪಿ ಮುಖಂಡ ರಾಘವೇಂದ್ರ ಪಾನಘಂಟಿ, ಸುಬ್ಬಯ್ಯ, ಶ್ರೀನಿವಾಸ ಹ್ಯಾಟಿ, ಕೊಟ್ರೇಶ್‌ ಶೇಡ್ಮಿ, ರಾಜೇಶ್‌ ತಟ್ಟಿ, ಕೊಟ್ರೇಶ್‌ ಕವಲೂರು, ಸುರೇಶ್‌ ದರಗದಕಟ್ಟಿ, ಯಮನೂರ ಹಾದಿಮನಿ, ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next