Advertisement

ಆ.2ಕ್ಕೆ ಉ.ಕ. ಭಾಗದ 13 ಜಿಲ್ಲೆಗಳು ಬಂದ್‌

07:00 AM Jul 26, 2018 | Team Udayavani |

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಆ.2ರಂದು ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ಬಂದ್‌ಗೆ ಕರೆ ನೀಡಲಾಗಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ ಕೋತಂಬರಿ ತಿಳಿಸಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಬಂದ್‌ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕಳೆದ 7 ದಶಕಗಳಿಂದ ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಭಾಗದಲ್ಲಿ ಶಿಕ್ಷಣ, ನೀರಾವರಿ, ಐಟಿ, ಬಿಟಿ, ಬೃಹತ್‌ ಕೈಗಾರಿಕೆ ಸ್ಥಾಪಿಸುವಲ್ಲಿ ಸರಕಾರಗಳು ಸಂಪೂರ್ಣ ವಿಫ‌ಲಗೊಂಡಿವೆ.ಆದ್ದರಿಂದ ಆ.2ರಂದು ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next