Advertisement

ಆ. 28ರಂದು ಜನೋತ್ಸವ ಸಮಾವೇಶ ನಡೆಯಲಿದೆ: ಸಚಿವ ಸುಧಾಕರ್‌

07:36 PM Aug 12, 2022 | Team Udayavani |

ಬೆಂಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ “ಜನೋತ್ಸವ’ ಕಾರ್ಯಕ್ರಮ ಆ.28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪನವರ 2 ವರ್ಷದ ಆಡಳಿತ ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 1 ವರ್ಷದ ಆಡಳಿತ ಸೇರಿ ಬಿಜೆಪಿಯ 3 ವರ್ಷದ ಆಡಳಿತದ ಸಾಧನೆಗಳನ್ನು ಸಂಭ್ರಮಿಸಲು ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಣಾಯಕ. ಅವರಿಂದ ಆರಿಸಿ ಬಂದ ಸರ್ಕಾರವೊಂದು ಅವರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದರೆ ಅದು ಜನ ಹಬ್ಬ ಎನಿಸಿಕೊಳ್ಳುತ್ತದೆ. ಆ ಅರ್ಥದಲ್ಲಿ ಕಾರ್ಯಕ್ರಮವನ್ನು ಜನೋತ್ಸವ ಎಂದು ಹೆಸರಿಸಲಾಗಿದೆ ಎಂದು ಸಚಿವ ಸುಧಾಕರ್‌ ವಿವರಿಸಿದರು.

ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಹಾಗೂ ತುಮಕೂರು ಜಿಲ್ಲೆಯ 4 ತಾಲೂಕುಗಳ ಜನ ಸೇರಲಿದ್ದಾರೆ.

ಇದೇ ರೀತಿಯ ಕಾರ್ಯಕ್ರಮಗಳನ್ನು ರಾಜ್ಯದ ಐದಾರು ಕಡೆ ಮಾಡಿ, ಕೊನೆಯಲ್ಲಿ ರಾಜ್ಯ ಮಟ್ಟದ ಬೃಹತ್‌ ಕಾರ್ಯಕ್ರಮ ನಡೆಸುವ ಬಗ್ಗೆ ಪಕ್ಷ ಆಲೋಚನೆ ಹೊಂದಿದೆ ಎಂದು ಸುಧಾಕರ್‌ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next