Advertisement

ಅಧಿಕ ಹಣ ಪಡೆವ ಅಂಗಡಿಕಾರರ ವಿರುದ್ಧ ಕ್ರಮ

01:14 PM Apr 11, 2020 | Naveen |

ಔರಾದ: ಪಡಿತರ ಫಲಾನುಭವಿಗಳಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಧಿಕವಾಗಿ ಹಣ ಪಡೆದು ಪಡಿತರ ವಿತರಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಕೊರೊನಾ ಜನ ಜಾಗೃತಿ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎರಡು ತಿಂಗಳ ಪಡಿತರ ವಿತರಿಸುವಂತೆ ಸರ್ಕಾರ ಆದೇಶಿಸಿದೆ. ಆದರೆ ನ್ಯಾಯ ಬೆಲೆ ಅಂಗಡಿ ಮಾಲೀಕರು ಫಲಾನುಭವಿಗಳಿಂದ ಅಧಿಕ ಹಣ ಪಡೆದು ವಿತರಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬರುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ತಾಲೂಕು ಮಟ್ಟದ ಪ್ರತಿಯೊಂದು ಇಲಾಖೆ ಅಧಿ ಕಾರಿಗಳು ಕೊರೊನಾ ವಿರುದ್ಧ ಸಮರ ಸಾರುತ್ತಿದ್ದು, ಅವರಿಗೆ ಬೇಕಾದ ಅಗತ್ಯ ಸೌಕರ್ಯ ಕಲ್ಪಿಸಿಕೊಡಲು ಸರ್ಕಾರ ಸಿದ್ಧ. ಕಿರಾಣಿ-ಔಷಧ ಅಂಗಡಿ, ತರಕಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರ್ಕಾರದ ಪ್ರತಿಯೊಂದು ಮಾಹಿತಿಯನ್ನು ಜನರಿಗೆ ಡಂಗುರದ ಮೂಲಕ ತಿಳಿಸಿ ಎಂದರು.

ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು. ಸಂಸದ ಭಗವಂತ ಖೂಬಾ, ತಹಶೀಲ್ದಾರ್‌ ಎಂ. ಚಂದ್ರಶೇಖರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿ ಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next