Advertisement

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

01:21 PM Sep 24, 2023 | Team Udayavani |

ಇಂಧೋರ್: ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಹುಮ್ಮಸ್ಸಿನಲ್ಲಿರುವ ಟೀಂ ಇಂಡಿಯಾ ಇಂದು ಆಸೀಸ್ ವಿರುದ್ಧದ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಇಂಧೋರ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ.

Advertisement

ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಅವರು ಕುಟುಂಬವನ್ನು ಭೇಟಿ ಮಾಡಬೇಕಾದ ಕಾರಣ ಅವರ ಬದಲಿಗೆ ಪ್ರಸಿಧ್ ಕೃಷ್ಣ ಅವರಿಗೆ ಜಾಗ ನೀಡಲಾಗಿದೆ.

ಆಸ್ಟ್ರೇಲಿಯಾ ತಂಡದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ನಾಯಕ ಪ್ಯಾಟ್ ಕಮಿನ್ಸ್ ಬದಲು ಇಂದು ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮಿಚ್ ಮಾರ್ಶ್ ಅವರನ್ನೂ ಹೊರಗಿಡಲಾಗಿದ್ದು, ಜೋಶ್ ಹೇಜಲ್ ವುಡ್ ಮತ್ತು ಸ್ಪೆನ್ಸರ್ ಜಾನ್ಸನ್ ತಂಡಕ್ಕೆ ಬಂದಿದ್ದಾರೆ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿ.ಕೀ), ಕ್ಯಾಮರೂನ್ ಗ್ರೀನ್, ಸೀನ್ ಅಬಾಟ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್, ಸ್ಪೆನ್ಸರ್ ಜಾನ್ಸನ್

ಭಾರತ : ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾ/ವಿ,ಕೀ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

Advertisement
Advertisement

Udayavani is now on Telegram. Click here to join our channel and stay updated with the latest news.

Next