Advertisement

ಆಸ್ಟ್ರೇಲಿಯಾ ಪ್ರಧಾನಿ ಭಾರತ ಪ್ರವಾಸ ರದ್ದು

10:35 AM Jan 05, 2020 | Team Udayavani |

ಮೆಲ್ಬರ್ನ್: ಭಾರತಕ್ಕೆ ಜ.13ರಂದು ಆಗಮಿಸುವುದಾಗಿ ಹೇಳಿದ್ದ
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ. ಹೊಸ ವರ್ಷಾರಂಭದಲ್ಲಿ ಆಸ್ಟ್ರೇಲಿಯಾದಲ್ಲಿ ಅಗ್ನಿ ದುರಂತ ಸಂಭವಿಸಿ 20 ಜನರು ಮೃತಪಟ್ಟು, ಜನಜೀವನ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ದೇಶವ್ಯಾಪಿ ಶೋಕಾಚರಣೆ ಘೋಷಿಸಲಾಗಿದೆ.

Advertisement

ಅಲ್ಲದೇ ಸಂತ್ರಸ್ತರಿಗೆ ಮೂಲ ಸೌಕರ್ಯ ನೀಡಬೇಕಿರುವ ಹಿನ್ನೆಲೆಯಲ್ಲಿ ಅವರು ಪ್ರವಾಸ ಕೈಗೊಳ್ಳದೇ ಇರಲು ನಿರ್ಧರಿಸಿದ್ದಾರೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next