Advertisement

ಕೆಕೆಆರ್ ಡಿಬಿ ಕಾರ್ಯದರ್ಶಿಯಾಗಿ ಆರ್.ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ

01:21 PM Oct 12, 2021 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ)ಯ ನೂತನ ಕಾರ್ಯದರ್ಶಿಯಾಗಿ ಆರ್. ವೆಂಕಟೇಶ್ ಕುಮಾರ್ ಮಂಗಳವಾರ ಕಲಬುರಗಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

Advertisement

ಈ ಮೂಲಕ ಮಂಡಳಿಯು ಅಸ್ತಿತ್ವಕ್ಕೆ ಬಂದ 7 ವರ್ಷಗಳ ಬಳಿಕ ಪೂರ್ಣಪ್ರಮಾಣದ ಕಾರ್ಯದರ್ಶಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿದಂತಾಗಿದೆ. ಇದುವರೆಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರೇ ಮಂಡಳಿಯ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

ಕಳೆದ ಸೆ. 17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್  ಬೊಮ್ಮಾಯಿ ಅವರು, ಕೆಕೆಆರ್ ಡಿಬಿಗೆ ಶಾಶ್ವತ ಕಾರ್ಯದರ್ಶಿ ನೇಮಿಸುವ ಭರವಸೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next