Advertisement

ಆಟೋ ಪಲ್ಟಿ: ಶಿಕ್ಷಕಿಯರಿಗೆ ಗಾಯ

01:19 PM Jan 27, 2022 | Shwetha M |

ವಿಜಯಪುರ: ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮೂವರು ಶಿಕ್ಷಕಿಯರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Advertisement

ತಿಕೋಟಾ ತಾಲೂಕಿನ ಜಾಲಗೇರಿ ಕ್ಲಸ್ಟರ ವ್ಯಾಪ್ತಿಯ ಚಿಗರಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವ ಎಸ್‌.ಎ. ಕೇರೂರ, ಎಸ್‌.ಎ. ಗರಸಂಗಿ, ಎಸ್‌. ಎಂ. ಬನಸೋಡೆ ಅವರು ಇಟ್ಟಂಗಿಹಾಳ ರಸ್ತೆ ಮೂಲಕ ವಿಜಯಪುರಕ್ಕೆ ಆಟೋದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಎದುರಿನಿಂದ ಬೈಕ್‌ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ.

ಗಾಯಾಳುಗಳನ್ನು ವಿಜಯಪುರ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್‌. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ಡಿ. ಮೊಸಲಗಿ, ಶಿಕ್ಷಣ ಸಂಯೋಜಕ ರವೀಂದ್ರ ಚಿಕ್ಕಮಠ, ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಇತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next