Advertisement

ಆಟೋ ಚಾಲಕ ಅನುಮಾನಾಸ್ಪದ ಸಾವು

10:39 AM Jul 20, 2018 | |

ಬೆಂಗಳೂರು: ಆಟೋ ಚಾಲಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಗಿರಿನಗರದಲ್ಲಿ ನಡೆದಿದೆ. ಮುನೇಶ್ವರ ಬ್ಲಾಕ್‌ನ ಲಿಂಗರಾಜ್‌ (30) ಮೃತ ಚಾಲಕ. ಮೇಲ್ನೋಟಕ್ಕೆ ಲಿಂಗರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪತ್ನಿಯೇ ಹತ್ಯೆಗೈದಿದ್ದಾಳೆ ಎಂದು ಮೃತನ ಸಂಬಂಧಿಗಳು ಆರೋಪಿಸಿ, ದೂರು ನೀಡಿದ್ದಾರೆ. ಈ ಕುರಿತು ಪತ್ನಿ ನಳಿನಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮಳವಳ್ಳಿ ಮೂಲದ ಲಿಂಗರಾಜು ಮತ್ತು ನಳಿನಿ ಕೆಲ ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಆದರೆ, ಇತ್ತೀಚೆಗೆ ಪತ್ನಿ ನಳಿನಿ ನಡವಳಿಕೆ ವಿಚಾರವಾಗಿ ಲಿಂಗರಾಜು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡು ಆಕೆಯೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಲಿಂಗರಾಜ್‌ ಸಹೋದರ ಸುರೇಶ್‌ ಆರೋಪಿಸಿದ್ದಾರೆ.
 
ಗುರುವಾರ ಬೆಳಗ್ಗೆ ಸುರೇಶ್‌ಗೆ ಕರೆ ಮಾಡಿದ್ದ ಪತ್ನಿ ನಳಿನಿ ನಿಮ್ಮ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು. ಬಳಿಕ ಸುರೇಶ್‌ ಪೊಲೀಸ್‌ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next