Advertisement

Auto rickshaw ವಿದ್ಯುತ್‌ ಕಂಬಕ್ಕೆ ಢಿಕ್ಕಿ; ಯುವತಿ ಸಾವು, ಹಲವರಿಗೆ ಗಾಯ

09:44 PM Sep 17, 2023 | Team Udayavani |

ಬಜಪೆ: ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ಬಂಗ್ಲೆಗುಡ್ಡೆಯಿಂದ ಗುರುಪುರ ಪೇಟೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದೆ.

Advertisement

ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ಅದ್ಯಪಾಡಿ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಗುರುಪುರ ಬಂಗ್ಲೆಗುಡ್ಡೆ ಇಳಿಜಾರು ರಸ್ತೆಯಾಗಿ ಅಣೆಬಳಿಯ ತಿರುವಿನಲ್ಲಿ ಆಟೋ ರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಚಾಲಕ ಸಹಿತ 5 ಮಂದಿ ಗಾಯಗೊಂಡಿದ್ದಾರೆ.

ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಪ್ರಸ್ತುತ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ವಿವಾಹ ನಿಶ್ಚಿತಾರ್ಥವಾಗಿತ್ತು
ಮೃತ ಯುವತಿ ಪ್ರಿಯಾ ಅವರಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮುಂದಿನ ವರ್ಷ ಜ. 4ರಂದು ಮದುವೆಗೆ ದಿನ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಮಂದಿ ಮದುವೆಯ ಸಿದ್ಧತೆಗಳನ್ನು ಕೂಡ ಮಾಡಿಕೊಂಡಿದ್ದರು. ಈ ನಡುವೆ ದುರ್ಘ‌ಟನೆ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next