Advertisement

ರಿಕ್ಷಾದಲ್ಲಿ ಮಹಿಳೆ ಬಿಟ್ಟುಹೋದ 50 ಸಾವಿರ ರೂ. ಹಿಂದಿರುಗಿಸಿ ಮಾನವೀಯತೆ ಮೆರೆದ ರಿಕ್ಷಾ ಚಾಲಕ

03:43 PM Oct 14, 2020 | sudhir |

ಉಡುಪಿ ; ಮಹಿಳೆಯೊಬ್ಬರು ರಿಕ್ಷಾದಲ್ಲಿ ಮರೆತು ಬಿಟ್ಟುಹೋದ 50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ ಅಂಬಲಪಾಡಿಯ ಜಯ ಶೆಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ.

Advertisement

ಘಟನೆ ವಿವರ ;
ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.

ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ ಶೆಟ್ಟಿ ಎಂಬವರು ಸೀಟ್‍ನಲ್ಲಿ ಪ್ಲಾಸ್ಟಿಕ್ ಇರುವುದನ್ನು ಗಮನಿಸಿದ್ದಾರೆ. ಏನೆಂದು ತೆರೆದಾಗ ಅದರಲ್ಲಿ 50ಸಾವಿರ ಹಣವಿದ್ದದ್ದು ಪತ್ತೆಯಾಗಿದೆ. ಆ ಕೂಡಲೇ ಉಡುಪಿಯಿಂದ ಕಟಪಾಡಿಗೆ ಬಂದು ಕುರ್ಕಾಲಿನ ಮಹಿಳೆಯನ್ನು ಸಂಪರ್ಕಿಸಿದ ಜಯ ಶೆಟ್ಟಿಯವರು 50ಸಾವಿರ ರೂಪಾಯಿ ಹಣವನ್ನು ಮರಳಿಸುವ ಮೂಲಕ ಮಾನವೀಯತೆ ಮೆರೆದರು.

ಆಟೋ ರಿಕ್ಷಾ ಚಾಲಕರ ಮಾನವೀಯ ಗುಣವನ್ನು ಹಾಗೂ ಅವರು ಮಾಡಿದ ಉಪಕಾರವನ್ನು ಮಹಿಳೆ ಹಾಗೂ ಕಟಪಾಡಿಯ ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. ಆಟೋರಿಕ್ಷಾ ಚಾಲಕ ಜಯ ಶೆಟ್ಟಿ ಅವರ ಈ ಕೆಲಸ ಇತರರಿಗೂ ಮಾದರಿಯಾಗಲಿ ಎಂಬುದೇ ಆಶಯ..

Advertisement

Advertisement

Udayavani is now on Telegram. Click here to join our channel and stay updated with the latest news.

Next