Advertisement

ಪಾಣೆಮಂಗಳೂರು: ರಿಕ್ಷಾ ಮಗುಚಿ ಬಿದ್ದು ಗಾಯಗೊಂಡ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು

06:04 PM Jun 29, 2020 | keerthan |

ಬಂಟ್ವಾಳ: ಎಸ್ಎಸ್ಎಲ್ ಸಿ ಪರೀಕ್ಷೆಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾವೊಂದು ಮಗುಚಿ ಬಿದ್ದ ಕಾರಣ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪ ನಡೆದಿದೆ.

Advertisement

ಗಾಯಗೊಂಡ ವಿದ್ಯಾರ್ಥಿಗಳು ಇಲ್ಲಿನ ಶಂಭೂರು ಸರಕಾರಿ ಪ್ರೌಢಶಾಲೆಯವರಾಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿಗೆ ತೀವ್ರ ತರದ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಶಂಭೂರು ಬಳಿಯ ಚರ್ಚ್ ಸಮೀಪ ನಾಯಿಯೊಂದು ರಿಕ್ಷಾಕ್ಕೆ ಅಡ್ಡಬಂದ ಪರಿಣಾಮ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು, ಮೂವರು ವಿದ್ಯಾರ್ಥಿನಿಯರಿಗೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next