Advertisement

ವೇಮಗಲ್ ಸಸ್ಪೆನ್ಸ್ ‘ಆವರ್ತ’

05:03 PM Nov 03, 2022 | Team Udayavani |

ಕನ್ನಡ ಚಿತ್ರರಂಗದಲ್ಲಿ “ತುಳಸಿ ದಳ’ ಮೊದಲಾದ ಸಿನಿಮಾಗಳನ್ನು ಕೊಟ್ಟ ಹಿರಿಯ ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌, ಈ ಬಾರಿ “ಆವರ್ತ’ ಎಂಬ ಮತ್ತೂಂದು ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಸದ್ದಿಲ್ಲದೆ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ “ಆವರ್ತ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ಇತ್ತೀಚೆಗೆ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಬಿಡುಗಡೆಯಾಯಿತು.

Advertisement

ನಟಿ ತಾರಾ ಅನುರಾಧಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌ ಮೊದಲಾದ ಗಣ್ಯರ ಸಮ್ಮುಖದಲ್ಲಿ “ಆವರ್ತ’ದ ಹಾಡುಗಳು ಮತ್ತು ಟ್ರೇಲರ್‌ ಹೊರಬಂದಿತು. ಇದೇ ವೇಳೆ ಮಾತನಾಡಿದ ನಟಿ ತಾರಾ ಅನುರಾಧಾ, “ನನ್ನ ಮೊದಲ ಸಿನಿಮಾ ತುಳಸಿದಳ. ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌ ನನ್ನನ್ನು ಗುರುತಿಸಿ ಆ ಸಿನಿಮಾದಲ್ಲಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ “ಆವರ್ತ’ ಸಿನಿಮಾಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌, “ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬದಲಾಗಿ ನೈಜಘಟನೆ ಕುರಿತು ಕಥೆ ಬರೆಯುವ ಸಲುವಾಗಿ ಆ ಯುವಕ ಹೊಸ ಸ್ಥಳವೊಂದಕ್ಕೆ ಹೋಗುತ್ತಾನೆ. ಅಲ್ಲಿಗೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ಸಿನಿಮಾದ ಕಥಾಹಂದರ’ ಎಂದು ವಿವರಣೆ ನೀಡಿದರು.

“ಆವರ್ತ’ ಸಿನಿಮಾದಲ್ಲಿ ಕಥಾನಾಯಕ  ನಾಗಿ ಜಯಚಂದ್ರ ಅಭಿನಯಿಸಿದ್ದು, ನಾಯಕಿಯಾಗಿ ನಯನಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹಿರಿಯ ನಟ ಶಿವರಾಮ್‌, ಧನ್ವಿತ್‌ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾದ ಮೂರು ಸಾಹಸ ಸನ್ನಿವೇಶಗಳಿಗೆ ಥ್ರಿಲ್ಲರ್‌ ಮಂಜು ಸಾಹಸ ಸಂಯೋಜಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅತಿಶಯ್‌ ಜೈನ್‌ ಸಂಗೀತ ಸಂಯೋಜನೆಯಿದೆ. ಮಲ್ಲಿಕಾರ್ಜುನ್‌ ಛಾಯಾಗ್ರಹಣವಿದೆ.

Advertisement

Udayavani is now on Telegram. Click here to join our channel and stay updated with the latest news.

Next