Advertisement

ಹುಬ್ಬಳ್ಳಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ; ಪ್ರಹ್ಲಾದ ಜೋಶಿ

04:26 PM Jan 06, 2022 | Team Udayavani |

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Advertisement

ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಹುಬ್ಬಳ್ಳಿಗೆ ಮತ್ತೂಂದು ಹಿರಿಮೆ ದೊರೆಯಲಿದೆ. ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್‌ಗಳ ಕೊರತೆ ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರ್ಕಾರ ಸ್ಥಾಪಿಸುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಯಾವುದೇ ವೈಮಾನಿಕ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹೆಬ್ಟಾಗಿಲು ಎಂದೇ ಖ್ಯಾತಿವೆತ್ತ ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿರುವುದು ಈ ಭಾಗದ ಜನತೆಗೆ ಸಂತೋಷಕರ ವಿಷಯ ಎಂದು ಜೋಶಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರದೀಪಸಿಂಗ್‌ ಪುರಿ ಹಾಗೂ ಈಗಿನ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒತ್ತಾಯಿಸಲಾಗಿತ್ತು. ಇದಕ್ಕೆ ಸಚಿವ ಜ್ಯೋತಿರಾದಿತ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಇದರಿಂದ ಇಡೀ ಉತ್ತರ ಕರ್ನಾಟಕದ ವಿಮಾನ ಚಾಲನಾ ತರಬೇತಿ ಬಯಸುವ ಯುವಕರಿಗೆ ಇದೊಂದು ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಅಲ್ಲದೇ ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಚಿವ ಜೋಶಿ ಕೃತಜ್ಞತೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next