Advertisement

ಸದಸ್ಯರ ಸಂಸ್ಥೆಗೆ ಪ್ರಶಸ್ತಿ: ಆರೋಪ

11:31 PM Oct 28, 2019 | Team Udayavani |

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಸದಸ್ಯರಾಗಿದ್ದ ನಿರುಪಮಾ ರಾಜೇಂದ್ರ ಅವರ ಕುಟುಂಬ ಸದಸ್ಯರ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸಂಘ-ಸಂಸ್ಥೆ ವಿಭಾಗದಲ್ಲಿ ಪ್ರಭಾತ್‌ ಇಂಟರ್‌ ನ್ಯಾಷನಲ್‌ ಅವರಿಗೆ ಪ್ರಶಸ್ತಿ ಬಂದಿದ್ದು, ಆ ಸಂಸ್ಥೆ ನಿರುಪಮಾ ರಾಜೇಂದ್ರ ಅವರ ಕುಟುಂಬ ಸದಸ್ಯರಿಗೆ ಸೇರಿದ್ದು ಎಂದು ಹೇಳಲಾಗಿದೆ.

Advertisement

ಈ ಕುರಿತು ಪ್ರತಿಕ್ರಿಯಿಸಿರುವ ನಿರುಪಮಾ ರಾಜೇಂದ್ರ, ಪ್ರಭಾತ್‌ ಆರ್ಟ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ಉತ್ತಮ ಕೆಲಸ ಮಾಡಿದ ಸಂಸ್ಥೆ. ಆದರೆ, ಅದಕ್ಕೂ ನನಗೂ ಯಾವ ಸಂಬಂಧವಿಲ್ಲ, ಆ ಸಂಸ್ಥೆ ನಮ್ಮ ಕುಟುಂಬ ಸದಸ್ಯರಿಗೆ ಸೇರಿದ್ದೂ ಅಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಎಲ್ಲ ಸದಸ್ಯರ ಒಮ್ಮತದ ತೀರ್ಮಾನದಂತೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next