Advertisement
ರೋಗಿಗಳಿಗೆ ಉತ್ತಮ ಚಿಕಿತ್ಸೆ, ವಾತಾವರಣ ಕಲ್ಪಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರಕಾರವು ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2015ರಿಂದ ‘ಕಾಯಕಲ್ಪ ಪ್ರಶಸ್ತಿ’ ನೀಡುತ್ತಿದೆ. ಈ ಪ್ರಶಸ್ತಿಗೆ ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆ ಮೊದಲನೇ ಬಾರಿ ಆಯ್ಕೆಯಾಗಿದೆ.
Related Articles
Advertisement
ಕಾಯಕಲ್ಪ ಪ್ರಶಸ್ತಿಗೆ ಆಸ್ಪತ್ರೆಯ ಗುಣ ಮಟ್ಟದ ಚಿಕಿತ್ಸೆ, ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ರೋಗಿಗಳ ಆರೈಕೆ, ತಜ್ಞರ ಲಭ್ಯತೆ, ಸಂಪ ನ್ಮೂಲಗಳ ಬಳಕೆ, ಶೌಚಾಲಯ ಒಟ್ಟು 16 ಮಾನದಂಡಗಳನ್ನು ಪರಿಗಣಿಸಲಾಗುತ್ತದೆ. ಈ ಮಾನದಂಡಗಳಲ್ಲಿ 83.3 ಅಂಕ ಪಡೆದಿದೆ.
ತಜ್ಞರು
ಸರಕಾರಿ ಆಸ್ಪತ್ರೆಯಲ್ಲಿ 24×7 ಚಿಕಿತ್ಸೆ ದೊರೆಯುತ್ತಿದ್ದು, ಇಲ್ಲಿ ಶಸ್ತ್ರಚಿಕಿತ್ಸಕರು, ಸಾಮಾನ್ಯ ಶಸ್ತ್ರಚಿಕಿತ್ಸಕ, ಔಷಧ ತಜ್ಞರು, ದಂತ, ನೇತ್ರ, ಕಿವಿಮೂಗು ಗಂಟಲು ತಜ್ಞರು, ಹೆರಿಗೆ, ಸ್ತ್ರೀರೋಗ ತಜ್ಞರು, ಮಕ್ಕಳ ರೋಗ ತಜ್ಞರು, ಅರಿವಳಿಕೆ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಕ್ಷಕಿರಣ ತಜ್ಞರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಮೊದಲಾದ ವೈದ್ಯರು ಇದ್ದಾರೆ.
ಮೊದಲ ಬಾರಿ ಪ್ರಶಸ್ತಿ
ಕುಂದಾಪುರ ಉಪವಿಭಾಗ ಆಸ್ಪತ್ರೆಗೆ ಮೊದಲ ಬಾರಿಗೆ ಕಾಯಕಲ್ಪ ಪ್ರಶಸ್ತಿ ಬಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ, ಸರಕಾರದ ಮಾರ್ಗಸೂಚನೆಯಂತೆ ಎಲ್ಲರೂ ತಂಡವಾಗಿ ಕೆಲಸ ನಿರ್ವಹಿಸಲಾಗುತ್ತಿದೆ. -ಡಾ| ರಾಬರ್ಟ್ ರೆಬೆಲ್ಲೋ, ಶಸ್ತ್ರಚಿಕಿತ್ಸಕ, ಆಡಳಿತ ವೈದ್ಯಾಧಿಕಾರಿ