Advertisement

ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ

07:45 AM May 27, 2020 | Lakshmi GovindaRaj |

ಬೇಲೂರು: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆ ಮತ್ತು  ಪುರಸಭೆ ಜಂಟಿಯಾಗಿ ಡೆಂಘೀ ನಿಯಂಣತ್ರಣದ ಬಗ್ಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ,  ಡೆಂಘೀ, ಚಿಕೂನ್‌ ಗುನ್ಯಾ ಕಾಯಿಲೆಗಳನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಅರಿವು ಮೂಡಿಸ ಬೇಕು. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರ ವಹಿಸ ಬೇಕು. ಸುತ್ತಲಿನ ಪರಿಸರವನ್ನು ಸ್ವತ್ಛವಾಗಿಡಬೇಕು. ಅನುಪಯುಕ್ತ ವಸ್ತುಗಳನ್ನು ಎಲ್ಲಂದರಲ್ಲಿ  ಬಿಸಾಡ ಬಾರದು ಟೈರು ಎಳನೀರು ಚಿಪ್ಪು ಇನ್ನಿತರೆ ವಸ್ತಗಳಲ್ಲಿ ನೀರು ಸಂಗ್ರಹವಾಗದಂತೆ ನಿಗಾ ವಹಿಸಬೇಕು ಎಂದರು.

ಕುಡಿವ ನೀರು ಶೇಖರಣೆ ಮಾಡುವ ಪಾತ್ರೆಗಳನ್ನು ತೊಳೆದು ಒಣಗಿಸಿ ನೀರು ತುಂಬ ಬೇಕು ನೀರು ತುಂಬಿದ  ಡ್ರಮ್‌ಗಳನ್ನು ಸ್ವತ್ಛವಾದ ಬಟ್ಟೆಯಿಂದ ಮುಚ್ಚಬೇಕು ಎಂದು ಹೇಳೀದರು. ಪುರಸಭೆ ಮುಖ್ಯಾಧಿಕಾರಿ ಎಸ್‌.ಎಸ್‌.ಮಂಜುನಾಥ್‌ ಮಾತನಾಡಿ, ಪುರಸಭೆಯಿಂದ ಪಟ್ಟಣದ 23 ವಾರ್ಡ್‌ಗಳಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು  ಕರಪತ್ರಗಳ ಮೂಲಕ ಅರಿವು ಮೂಡಿಸ ಲಾಗುತ್ತಿದೆ ಎಂದರು.

ಪಟ್ಟಣದಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿದ್ದು ಕಸ ವಿಂಗಡನೆ ಖಾಲಿ ನಿವೇಶನ ಮತ್ತು ಪಾರ್ಕ್‌ ಗಳಲ್ಲಿ ಬೆಳೆದಿರುವ ಗಿಡಗಳನ್ನು  ತೆರವುಗೊಳಿಸಲಾಗಿದೆ. ಚರಂಡಿಗೆ ರಾಸಾಯನಿಕ ಸಿಂಪಡಿಸಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲಾಗಿದೆ ಎಂದರು. ತಹಶೀಲ್ದಾರ್‌ ನಟೇಶ್‌, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್‌, ಆರೋಗ್ಯ  ಇಲಾಖೆ ಸಿಬಂದಿಗಳಾದ ಕೃಷ್ಣಪ್ಪ, ಆಯುಷ್‌ ವೈದ್ಯರಾದ ಗೀತಾ,  ಹಬೀಬುಲ್ಲಾ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next