Advertisement

ಚಿಕ್ಕಬಸ್ತಿ ನಿವಾಸಿಗಳಿಗೆ ಮತದಾನ ಕುರಿತು ಜಾಗೃತಿ

06:41 AM Mar 14, 2019 | |

ಕೆಂಗೇರಿ: ಚಾಮರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿನಿಯರು ಸಮೀಪದ ಚಿಕ್ಕಬಸ್ತಿ ನಿವಾಸಿಗಳಿಗೆ ಬುಧವಾರ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿದರು.

Advertisement

ಯಶವಂತಪುರ ವಿಧಾನಸಭಾ ಕ್ಷೇತ್ರದ ಸೂಲಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ 2018-19ರ ಸಾಲಿನ ಎನ್‌ಎಸ್‌ಎಸ್‌ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಭಿಯಾನ ನಡೆಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಿ.ಎಸ್‌.ಜಿಯಾವುಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಬಸವರಾಜು, ಶಿಬಿರಾಧಿಕಾರಿಗಳಾದ ಗೋವಿಂದರಾಜು, ಅಶ್ವಿ‌ನಿ, ಶೇಟ್‌ ಬಾಬು, ಸರ್ಕಾರಿ ಹಿರಿಯ
ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಿ.ಎಂ.ರಾಮಚಂದ್ರ, ಎಸ್‌. ಶ್ರೀನಿವಾಸ್‌ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next