Advertisement

ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಕ್ಕಾಗಿ ಜಾಗೃತಿ ಕಾರ್ಯಕ್ರಮ

11:08 AM Sep 29, 2019 | Suhan S |

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮ ಪಂಚಾಯಿತಿ ವತಿಯಿಂದ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣ ನಿಮಿತ್ತ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಪಿಡಿಒ ಶ್ರೀದೇವಿ ಹಿರೇಮಠ ನೇತೃತ್ವದಲ್ಲಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹಾಗೂ ಚಾಲಕ-ನಿರ್ವಾಹಕರನ್ನು ಭೇಟಿಯಾಗಿ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಮಾಡುವ ಮೂಲಕ ಸ್ವಚ್ಛತೆಗೆ ಎಲ್ಲರೂ ಕೈ ಜೋಡಿಸುವಂತೆ ಜಾಗೃತಿ ಮೂಡಿಸಲಾಯಿತು.

Advertisement

ಬಸ್‌ ಗೆ ಬ್ಯಾನರ್‌ ಅಳವಡಿಸಿ ಸ್ವಚ್ಛ ಭಾರತ ಅಭಿಯಾನ ಆಂದೋಲನ ನಡೆಸಲಾಯಿತು. ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮ, ಪರಿಸರ ಮಾಲಿನ್ಯದ ಬಗ್ಗೆ ಅರಿವು ಮೂಡಿಸಿ, ಇನ್ನು ಮುಂದೆ ಪ್ಲಾಸ್ಟಿಕ್‌ ಬಳಸುವುದಿಲ್ಲ ಎಂದು ಶಾಲಾ ಮಕ್ಕಳಿಂದ ಹಾಗೂ ಸಾರ್ವಜನಿಕರಿಂದ ಪ್ರತಿಜ್ಞೆ ಮಾಡಿಸಿಕೊಳ್ಳಲಾಯಿತು. ಗ್ರಾಮದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಭೇಟಿಯಾಗಿ ನೋಟಿಸ್‌ ನೀಡಿ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣಕ್ಕಾಗಿ ಎಲ್ಲರೂ ಧ್ವನಿಯಾಗಬೇಕು. ಇದನ್ನು ಕಾರ್ಯರೂಪಕ್ಕೆ ತಂದರೆ ಸ್ವತ್ಛತೆಯೆಡೆಗೆ ಭಾರತ ನಿರ್ಮಾಣ ಸಾಧ್ಯವಿದೆ. ಹೀಗಾಗಿ ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಪಿಡಿಒ ಹಿರೇಮಠ ಕರೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಕವಿತಾ ಬಡಿಗೇರ, ಉಪಾಧ್ಯಕ್ಷ ಅಶೋಕ ತಳೇಮನಿ, ಸದಸ್ಯರಾದ ನಾನಪ್ಪ ಪಾರ್ವತಿ, ಪುಂಡಲೀಕ ಮುರಾರಿ, ಸಂಭಾಜಿ ಯಮೋಜಿ, ಗಣಪತಿ ಹೊಸಮನಿ, ಸಿಬ್ಬಂದಿ ಭಾರತಿ ಸಾಂಬ್ರೇಕರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next