Advertisement
ನಮ್ಮ ಮೂಲನಂಬಿಕೆಗಳು ಸಮಾಜದ ಬೆಳವಣಿಗೆಗೆ ಪೂರಕವಾಗಿವೆ. ಆದರೆ ಮೂಢನಂಬಿಕೆಗಳು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡಹುತ್ತವೆ. ವಿಜ್ಞಾನವು ಮೂಲ ನಂಬಿಕೆಯಂತೆ ಕೆಲಸ ಮಾಡಬೇಕು ಮತ್ತು ಸಮಾಜದ ಪ್ರಗತಿ ಸಾಧ್ಯವಾಗಬೇಕು ಎಂದು ಹೇಳಿದರು. ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ವಿಜ್ಞಾನ ಪ. ಗ್ರಾಮೀಣ ಮಕ್ಕಳನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ತಯಾರಿಸುವ ನಿಟ್ಟಿನಲ್ಲಿ ಬಹಳ ಉತ್ತಮ ಕಾರ್ಯ ಮಾಡುತ್ತಿವೆ. ಇಂತಹ ಅಭಿಯಾನಗಳು ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದರು.
ಮುಖ್ಯ ಅತಿಥಿ ರಾಜ್ಯ ವಿಜ್ಞಾನ ಪರಿಷತ್ ಕಾರ್ಯದರ್ಶಿ ಕರುಣಾಕರ ರೈ ಮಾತನಾಡಿ, ರಾಜ್ಯದಲ್ಲೇ ಪುತ್ತೂರು ತಾಲೂಕಿನ ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು ವಿಜ್ಞಾನ ಪರಿಷತ್ನ ಅವಕಾಶ ಗಳನ್ನು ಹೆಚ್ಚಾಗಿ ಬಳಸಿಕೊಂಡಿವೆ. ಇದರ ಪರಿಣಾಮ ತಾಲೂಕಿನ ಹಲವಾರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳದಲ್ಲಿ ಪಾಲ್ಗೊಂಡಿದ್ದಾರೆ. ಮಕ್ಕಳ ಕಲಿಕೆಗೆ ಬಡತನ, ಸಿರಿವಂತಿಕೆ ಎಂಬುದಿಲ್ಲ. ಸರಿಯಾದ ಮಾರ್ಗದರ್ಶನ ಸಿಕ್ಕಿದರೆ ಯಶಸ್ಸು ಸಿಗಲು ಸಾಧ್ಯವಿದೆ ಎಂದರು. ವಿಜ್ಞಾನ ಕ್ಷೇತ್ರದಲ್ಲಿ ನಿರೀಕ್ಷೆ
ಅತಿಥಿ ರೋಟರಿ ಕ್ಲಬ್ ವಲಯ ಸೇನಾನಿ ರತ್ನಾಕರ್ ರೈ ಮಾತನಾಡಿ, ಇಂದು ವಿಜ್ಞಾನ ದಲ್ಲಿ ಭಾರತ ಸಾಕಷ್ಟು ಪ್ರಗತಿ ಹೊಂದಿದೆ. ಭವಿಷ್ಯದ ದೃಷ್ಟಿಯಿಂದ ವಿಜ್ಞಾನ ಕ್ಷೇತ್ರದ ಮೂಲಕ ಸಾಕಷ್ಟು ನಿರೀಕ್ಷೆಯೂ ಇದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ, ಮಾರ್ಗದರ್ಶನ, ಅವಕಾಶ ಸಿಕ್ಕಿದರೆ ದೇಶದಲ್ಲಿ ಉತ್ತಮ ವಿಜ್ಞಾನಿಗಳಾಗಿ ರೂಪುಗೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಕೊಂಬೆಟ್ಟು ಸರಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕ ಚಂದು ನಾಯ್ಕ, ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲ ಶಿವರಾಮ ಹೆಬ್ಟಾರ್, ಎಸ್ಡಿಎಂಸಿ ಕಾರ್ಯಾಧ್ಯಕ್ಷ ಜೋಕಿಂ ಡಿ’ಸೋಜಾ ಅವರು ಶುಭ ಹಾರೈಸಿದರು.
Related Articles
Advertisement
ಸಾಧನೆಗಾಗಿ ತರಬೇತಿಅಧ್ಯಕ್ಷತೆ ವಹಿಸಿದ್ದ ರಾಜ್ಯ ವಿಜ್ಞಾನ ಪರಿಷತ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕ್ಕರ್ ಆರ್ಲಪದವು ಮಾತನಾಡಿ, ಹಳ್ಳಿಗಾಡಿನ ಮಕ್ಕಳಲ್ಲಿ ವಿಜ್ಞಾನದ ಕುರಿತು ಅರಿವು ಮೂಡಿಸಿ ಅವರನ್ನು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧಿಗಳನ್ನಾಗಿ ಮಾಡಲು ತರಬೇತಿ ನೀಡುವುದು ಪ್ರಮುಖ ಉದ್ದೇಶವಾಗಿದೆ. ಅಜಿತ್ ಹೆಬ್ಟಾರ್ರಂತಹ ನುರಿತ ತರಬೇತಿದಾರರಿಂದ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿ ರುವುದು ಈ ಅಭಿಯಾನದ ಯಶಸ್ಸಿಗೆ ಇನ್ನಷ್ಟು ಬಲ ಬಂದಂತಾಗಿದೆ ಎಂದರು.