Advertisement

ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನ

01:13 PM Jan 29, 2020 | Suhan S |

ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವ ಸಮುದಾಯಕ್ಕೂ ತೊಂದರೆ ಇಲ್ಲ. ಭಾರತೀಯ ಮುಸ್ಲಿಮರಿಗೂ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಭಾರತವನ್ನು ಗಟ್ಟಿಗೊಳಿಸಲು ಪೌರತ್ವ ಕಾಯ್ದೆ ಅಗತ್ಯವಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

Advertisement

ನಗರದ ಶೆಟ್ಟಿಗಲ್ಲಿ ಜೈನಮಂದಿರದ ಸಭಾಂಗಣದಲ್ಲಿ ಮಂಗಳವಾರ ಗಣರಾಜ್ಯೋತ್ಸವದ ಅಂಗವಾಗಿ ಬಿಜೆಪಿ ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯಿದೆ ಜನಜಾಗೃತಿ ಅಭಿಯಾನ ಉದ್ಧೇಶಿಸಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಪ್ರತಿಭಟನೆ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿವೆ. ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್‌, ಜಿಲ್ಲಾ ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ ಗುಡಾಕಾಯಿ, ಪ್ರಧಾನ ಕಾರ್ಯದರ್ಶಿ ಕಾಂಚನ್‌ ಕೋಪರಡೆ. ಶಶಿ ಪಾಟೀಲ್‌, ಕಾರ್ಯದರ್ಶಿ ಸೀಮಾ ಪವಾರ್‌, ಸವಿತಾ ಹೆಬ್ಟಾರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next