Advertisement

ಅಕ್ಷರ್‌ ಪಟೇಲ್‌ಗೆ ಜಾಗ ಬಿಟ್ಟ ಜಡೇಜ

06:20 AM Sep 26, 2017 | |

ಇಂದೋರ್‌: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಕೊನೆಯ 2 ಏಕದಿನ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಯಾವುದೇ ಅಚ್ಚರಿಯ ಆಯ್ಕೆ ಕಂಡುಬಂದಿಲ್ಲ.

Advertisement

ಮೊದಲ ಆಯ್ಕೆಯ ವೇಳೆ ತಂಡದಲ್ಲಿದ್ದು, ಬಳಿಕ ಎಡಗಾಲಿನ ನೋವಿನಿಂದ ಹೊರಗುಳಿದ ಸ್ಪಿನ್ನರ್‌ ಅಕ್ಷರ್‌ ಪಟೇಲ್‌ ಈಗ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಇವರ ಬದಲು ಆಯ್ಕೆಯಾಗಿದ್ದ ರವೀಂದ್ರ ಜಡೇಜ ಅವರನ್ನು ಕೈಬಿಡಲಾಗಿದೆ.

ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಮೊದಲ 3 ಪಂದ್ಯಗಳಿಗೆ ಆಯ್ಕೆಯಾಗಿದ್ದ ಧವನ್‌, ಬಳಿಕ ಪತ್ನಿಯ ಅನಾರೋಗ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದರು. ಹೀಗಾಗಿ ಕೊನೆಯ 2 ಪಂದ್ಯಗಳಿಗೆ ಧವನ್‌ ಮರಳಬಹುದೆಂಬ ನಿರೀಕ್ಷೆ ಇತ್ತು. ಆದರೆ ಇದು ಹುಸಿಯಾಗಿದೆ.ಸರಣಿಯ ಉಳಿದೆರಡು ಪಂದ್ಯಗಳು ಬೆಂಗಳೂರು (ಸೆ. 28) ಮತ್ತು ನಾಗ್ಪುರದಲ್ಲಿ (ಅ. 1) ನಡೆಯಲಿವೆ.

ಭಾರತ ತಂಡ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮ, ಅಜಿಂಕ್ಯ ರಹಾನೆ, ಕೆ.ಎಲ್‌. ರಾಹುಲ್‌, ಮನೀಷ್‌ ಪಾಂಡೆ, ಕೇದಾರ್‌ ಜಾಧವ್‌, ಮಹೇಂದ್ರ ಸಿಂಗ್‌ ಧೋನಿ, ಹಾರ್ದಿಕ್‌ ಪಾಂಡ್ಯ, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ಜಸ್‌ಪ್ರೀತ್‌ ಬುಮ್ರಾ, ಭುವನೇಶ್ವರ್‌ ಕುಮಾರ್‌, ಉಮೇಶ್‌ ಯಾದವ್‌, ಮೊಹಮ್ಮದ್‌ ಶಮಿ, ಅಕ್ಷರ್‌ ಪಟೇಲ್‌.

Advertisement

Udayavani is now on Telegram. Click here to join our channel and stay updated with the latest news.

Next