Advertisement

Karnataka polls: ರಾಜೀನಾಮೆಗೂ ಮೊದಲೇ ಜೆಡಿಎಸ್‌ ಬಿಫಾರ್ಮ್‌ ಪಡೆದ ಆಯನೂರು ಮಂಜುನಾಥ್

02:28 PM Apr 19, 2023 | Team Udayavani |

ಶಿವಮೊಗ್ಗ: ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Advertisement

ಶಿವಮೊಗ್ಗ ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇನ್ನು ಬಿಜೆಟ್‌ ಟಿಕೆಟ್‌ ಘೋಷಣೆ ಮಾಡಿಲ್ಲ. ಘೋಷಣೆಗೂ ಮೊದಲೇ ಆಯನೂರು ಮಂಜುನಾಥ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದು, ಇದೀಗ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಚಿತ್ರದುರ್ಗದಲ್ಲಿ ಹೆಚ್.ಡಿಕೆ. ಅವರನ್ನು ಭೇಟಿಯಾಗಿ ಬಿಫಾರ್ಮ್‌ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಜೆಡಿಎಸ್‌ ನಿಂದ ಆಯನೂರು ಮಂಜುನಾಥ್ ಸ್ಪರ್ಧಿಸಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next