Advertisement

ಅಯೋಧ್ಯೆ ತೀರ್ಪು ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್ ಬೋರ್ಡ್

09:42 AM Nov 28, 2019 | keerthan |

ಹೊಸದಿಲ್ಲಿ: ಇತ್ತೀಚೆಗಷ್ಟೇ ಪ್ರಕಟವಾದ ಐತಿಹಾಸಿಕ ಅಯೋಧ್ಯೆ ತೀರ್ಪನ್ನು ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.

Advertisement

ಇಂದು ಸಭೆ ಸೇರಿದ್ದ ಸುನ್ನಿ ವಕ್ಫ್ ಬೋರ್ಡ್ ಸದಸ್ಯರು ಈ ತೀರ್ಮಾನ ಕೈಗೊಂಡಿದ್ಧಾರೆ.

ವಿವಾದಿತ ರಾಮಜನ್ಮ ಭೂಮಿಯ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ಸೇರಬೇಕು ಎಂದು ರಂಜನ್ ಗೋಗೊಯ್ ನೇತೃತ್ವದ ಸುಪ್ರೀಂ ಪೀಠ ಐತಿಹಾಸಿಕ ತೀರ್ಪು ನೀಡಿತ್ತು.

ಇಂದು ಸಭೆ ಸೇರಿದ್ದ ಸುನ್ನಿ ವಕ್ಫ್ ಬೋರ್ಡ್ನ ಏಳು ಸದಸ್ಯರಲ್ಲಿ ಆರು ಮಂದಿ ಮರುಪರಿಶೀಲನೆ ಅರ್ಜಿ ಸಲ್ಲಿಸದೇ ಇರಲು ತೀರ್ಮಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next