Advertisement

26ಕ್ಕೆ ಅಯೋಧ್ಯೆ ಕೇಸ್‌ ವಿಚಾರಣೆ

12:30 AM Feb 21, 2019 | |

ಹೊಸದಿಲ್ಲಿ: ಹಲವು ಬಾರಿ ಮುಂದೂಡಿಕೆಯಾಗಿದ್ದ ಅಯೋಧ್ಯೆ ಪ್ರಕರಣ ವಿಚಾರಣೆ ಕೊನೆಗೂ ಫೆ. 26ಕ್ಕೆ ನಿಗದಿಯಾಗಿದೆ. ಈ ಹಿಂದೆ ಜ.29ರಂದು ನಡೆಯ ಬೇಕಿದ್ದ ವಿಚಾರಣೆ ನ್ಯಾಯಮೂರ್ತಿ ಎಸ್‌.ಎ. ಬೊಬ್ದೆ ಲಭ್ಯವಿಲ್ಲ ಎಂಬ ಕಾರಣಕ್ಕೆ ಮುಂದೂಡಿಕೆಯಾಗಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ವಿವಾದಿತ 2.77 ಎಕರೆ ಭೂಮಿಯಲ್ಲಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್‌ ಲಲ್ಲಾಗೆ ಹಂಚುವ ಸಂಬಂಧ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ನೀಡಿದ ತೀರ್ಪಿಗೆ ಮೇಲ್ಮನವಿ ಮತ್ತು ಒಟ್ಟು ಹದಿನಾಲ್ಕು ಅರ್ಜಿಗಳ ವಿಚಾರಣೆಯನ್ನು ಮಾಡಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next