Advertisement

ಅಯೋಧ್ಯೆ ತೀರ್ಪು; ನಾಳೆ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಯ ಇನ್ ಚೇಂಬರ್ ವಿಚಾರಣೆ, ಏನಿದು?

09:59 AM Dec 12, 2019 | Team Udayavani |

ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಗುರುವಾರ ಸುಪ್ರೀಂಕೋರ್ಟ್ ನ ಪಂಚಸದಸ್ಯ ಪೀಠ ಇನ್ ಚೇಂಬರ್ (ಆಂತರಿಕ) ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.

Advertisement

ಒಂದು ವೇಳೆ ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ನಿರ್ಧರಿಸಿದರೆ, ನಂತರ ಎಲ್ಲಾ ಕಕ್ಷಿ(ಪಾರ್ಟಿ)ದಾರರ ವಿಚಾರಣೆ ಮತ್ತೊಮ್ಮೆ ಆಲಿಸಬೇಕಾಗುತ್ತದೆ. ಒಂದು ವೇಳೆ ತೆರೆದ ನ್ಯಾಯಾಲಯದ ವಿರುದ್ಧ ನಿರ್ಧಾರ ಕೈಗೊಂಡರೆ, ನಾಳೆಯೇ ಮರುಪರಿಶೀಲನಾ ಅರ್ಜಿ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್ 9ರಂದು ಸುಪ್ರೀಂಕೋರ್ಟ್ ನ ಪಂಚಸದಸ್ಯ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಮಾರು ಏಳು ಮೇಲ್ಮನವಿಗಳು ದಾಖಲಾಗಿವೆ. ಸೋಮವಾರವೂ ಅಯೋಧ್ಯೆ ಪ್ರಕರಣದಲ್ಲಿ ಮರು ಪರಿಶೀಲನೆ ನಡೆಸಬೇಕೆಂದು ಸುಮಾರು 40 ಮಂದಿ ಸಾಮಾಜಿಕ ಕಾರ್ಯಕರ್ತರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಮುಸ್ಲಿಮರಿಗೆ ಅಯೋಧ್ಯೆಯಲ್ಲಿಯೇ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ನೀಡಬೇಕೆಂಬ ಸುಪ್ರೀಂ ತೀರ್ಪಿನ ವಿರುದ್ಧ ಹಿಂದೂ ಮಹಾಸಭಾ ಕೂಡಾ ಮರುಪರಿಶೀಲನಾ ಅರ್ಜಿಯನ್ನು ದಾಖಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next