Advertisement

ಅಯೋಧ್ಯೆ: ಇಂದು ಸುಪ್ರೀಂನಲ್ಲಿ ವಿಚಾರಣೆ

12:30 AM Jan 04, 2019 | Team Udayavani |

ಹೊಸದಿಲ್ಲಿ: ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ 14 ಅರ್ಜಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹಾಗೂ ನ್ಯಾ. ಎಸ್‌.ಕೆ.ಕೌಲ್‌ ಅವರನ್ನೊಳಗೊಂಡ ನ್ಯಾಯಪೀಠವು ಶುಕ್ರವಾರ, ಈ 14 ಮನವಿಗಳ ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವ ಸಾಧ್ಯತೆಯಿದೆ. 2010ರಲ್ಲಿ ಅಲಹಾ ಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಈ ಮೇಲ್ಮನವಿಗಳು ಸಲ್ಲಿಕೆಯಾಗಿವೆ. ಜನವರಿ 4ರಂದು ವಿಚಾರಣೆಯ ಕುರಿತು ನಿರ್ಧರಿ ಸುವುದಾಗಿ ಕಳೆದ ಅ.29ರಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಬಳಿಕ, ತ್ವರಿತ ವಿಚಾರಣೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ನ್ಯಾಯಾಲಯ ವಜಾ ಮಾಡಿತ್ತು.

Advertisement

ಸುಗ್ರೀವಾಜ್ಞೆಗೆ ವಿರೋಧ: ಈ ನಡುವೆ, ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ ನೀಡುವ ತೀಪೇ ಅಂತಿಮ ವಾಗಬೇಕು. ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next