Advertisement

BJP, RSS ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿಸಿಕೊಂಡಿವೆ : ಓಂ ಪ್ರಕಾಶ್ ರಾಜ್‌ ಭರ್

04:46 PM Jun 14, 2021 | Team Udayavani |

ನವ ದೆಹಲಿ : ಬಿಜೆಪಿ, ಆರ್‌ ಎಸ್‌ ಎಸ್ ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿ ಮಾಡಿಕೊಂಡಿವೆ ಎಂದು ಎಸ್‌ಬಿಎಸ್‌ಪಿ ಮುಖ್ಯಸ್ಥ ಎಸ್‌ ಬಿ ಎಸ್‌ ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ ಭರ್ ಹೇಳಿದ್ದಾರೆ.

Advertisement

ಅಯೋಧ್ಯೆಯ ಉದ್ದೇಶಿತ ರಾಮ ಮಂದಿರಕ್ಕೆ ಭೂಮಿ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ  ಸಿಬಿಐ ತನಿಖೆಯನ್ನು ಬೆಂಬಲಿಸಿದ ರಾಜ್‌ ಭರ್, ಬಿಜೆಪಿ ಹಾಗೂ ಆರ್‌ ಎಸ್‌ ಎಸ್ ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ತರಾಟೆಗೆ ತೆಗೆದುಕೊಂಡ ರಾಜ್‌ಭರ್, ಆರೋಪಿಗಳಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಈ ಕುರಿತಾಗಿ ಪ್ರತಿಕ್ರಿಯೇ ನೀಡಿದ ಅವರು, ಈ  ಹಗರಣದ ಬಗ್ಗೆ ಶೀಘ್ರದಲ್ಲಿ ಸಿಬಿಐ ಹಾಗೂ ಇಡಿ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದ್ದಲ್ಲದೇ, ಮೋದಿ ಹಾಗೂ ಯೋಗಿ ಇಬ್ಬರೂ ಕೂಡ ಬಿಜೆಪಿ ಭ್ರಷ್ಟಾಚಾರ ಮುಕ್ತ ಎಂದು ಹೇಳಿಕೊಳ್ಳುತ್ತಾರೆ. ಕೋಟ್ಯಾಂತರ ರೂಪಾಯಿಗಳ ಹಗರಣ ಕಣ್ಣಿಗೆ ಕಾಣಿಸುವುದಿಲ್ಲವೆ..? ಈ ಬಗ್ಗೆ ಮೌನ ತಾಳಿದ್ದು ಯಾಕೆ..? ಶೀಘ್ರದಲ್ಲಿಯೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗುಡುಗಿದ್ದಾರೆ.

Advertisement

ಕೋಟ್ಯಾಂತರ ರಾಮ ಭಕ್ತರ ನಂಬಿಕೆಯ ಹೆಸರಿನಲ್ಲಿ ಹಗರಣ ನಡೆಸಲಾಗುತ್ತಿದೆ. ಬಿಜೆಪಿ ಮುಖಂಡರು ಈ ಬಗ್ಗೆ ಮಾತನಾಡುತ್ತಿಲ್ಲ. ಜನರನ್ನು ನಂಬಿಸಿ ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಶ್ರೀರಾಮ್ ಜನಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಅಯೋಧ್ಯೆಯ ಬ್ಯಾಗ್ ಬೈಸೈ ಗ್ರಾಮದಲ್ಲಿ 2 ಕೋಟಿ ರೂ.ಗಳ ಮೌಲ್ಯದ 1.208 ಹೆಕ್ಟೇರ್ ಭೂಮಿಯನ್ನು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಅವರ ಸಹಾಯದಿಂದ 18.5 ಕೋಟಿ ರೂ. ಗೆ ಖರಿದಿಸಿದ್ದಾರೆಂದು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪ ಮಾಡಿದ ಒಂದು ದಿನದ ನಂತರ ರಾಜ್‌ಭರ್ ಈ ಹೇಳಿಕೆ ನೀಡಿದ್ದಾರೆ.

ಇನ್ನು, ಇದನ್ನು ಮನಿ ಲಾಂಡರಿಂಗ್ ಪ್ರಕರಣ ಎಂದು ಆರೋಪಿಸಿ, ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರು ಈ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. ಆದರೇ,  ಶ್ರೀರಾಮ್ ಜನಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಗುಜರಾತ್ ನ ಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಕ್ಷೇತ್ರಗಳಿಂದ ಎಎಪಿ ಸ್ಪರ್ಧೆ : ಕೇಜ್ರಿವಾಲ್

Advertisement

Udayavani is now on Telegram. Click here to join our channel and stay updated with the latest news.

Next