Advertisement

Ayodhya ಶ್ರೀರಾಮನಿಗೆ ಶ್ರೀ ಕಾಶೀ ಮಠದಿಂದ ವಿಶೇಷ ಸ್ವರ್ಣ ಹಾರ

12:19 AM Jan 23, 2024 | Team Udayavani |

ಮಂಗಳೂರು: ಶ್ರೀ ಕಾಶೀಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ಶ್ರೀ ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮ ದೇವರಿಗೆ ಸುಮಾರು 25 ಲಕ್ಷ ರೂ. ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೆಂಡೆಂಟ್‌ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು.

Advertisement

ಆಕರ್ಷಕವಾಗಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಅವರಿಗೆ ಕಾಶೀಮಠದ ಪರವಾಗಿ ಆಲ್‌ ಟೆಂಪಲ್‌ ಅಸೋಸಿಯೇಶನ್‌ ಅಧ್ಯಕ್ಷ ಅತುಲ್‌ ಕುಡ್ವ, ಫೂಜ್ಲಾನಾ ಗ್ರೂಪ್‌ನ ಅನಂತ್‌ ಪೈ, ದೆಹಲಿ ಸಮಾಜದ ಗಣೇಶ್‌ ಮಲ್ಯ ಹಾಗೂ ಸಮಾಜದ ಪ್ರಮುಖರು ಹಸ್ತಾಂತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next