Advertisement

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

04:47 PM Oct 25, 2021 | Team Udayavani |

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಬಳಕೆಯಾಗುವ ಶಿಲೆಗಳ ಪೂಜೆ ಮತ್ತು ಅವುಗಳನ್ನು ಹೊತ್ತ ಲಾರಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಬೆಂಗಳೂರಿನ ಸಾದರಹಳ್ಳಿ ಗೇಟ್ (ಏರ್ ಪೋರ್ಟ್ ರಸ್ತೆ)ನಲ್ಲಿ ಸೋಮವಾರ ನಡೆಯಿತು.

Advertisement

ವಿವೇಕಾನಂದ ಸೇವಾ ಸಮಿತಿ ಮತ್ತು ಹನುಮಾನ್ ಗ್ರಾನೈಟ್ ಇವುಗಳ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆ ಟ್ರಸ್ಟ್ ಸದಸ್ಯರಾಗಿರುವ ಪೇಜಾವರ ಮಠಾಧೀಶ, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಸಾನ್ನಿಧ್ಯ ವಹಿಸಿ ಶಿಲಾಪೂಜೆ ನೆರವೇರಿಸಿ ಲಾರಿಗಳಿಗೆ ಹಸಿರು ನಿಶಾನೆ ತೋರಿ ಸಂದೇಶ ನೀಡಿದರು.

ಇದನ್ನೂ ಓದಿ: ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ತಿಪ್ಪೇಸ್ವಾಮಿ‌,  ಬಿ ಎನ್ ಮೂರ್ತಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯ ಮಂತ್ರಿ ಡಿ ವಿ ಸದಾನಂದ ಗೌಡ ,ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ವಿಹಿಂಪ ಮುಖಂಡರಾದ ಗೋಪಾಲ್, ಕೇಶವ ಹೆಗಡೆ, ಆನಂದ ಗುರೂಜಿ, ಸ್ಥಳೀಯ ಶಾಸಕ ನಿಸರ್ಗ ನಾರಾಯಣ ಮೂರ್ತಿ  ಮೊದಲಾದವರು ಉಪಸ್ಥಿತರಿದ್ದರು .‌

 

Advertisement
Advertisement

Udayavani is now on Telegram. Click here to join our channel and stay updated with the latest news.

Next