Advertisement
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರೆಸ್ಸೆಸ್ ಪ್ರಮುಖ ಡಾ| ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ರಾಮ ಎಂದರೆ ನಮ್ಮ ಧರ್ಮ, ಸಂಸ್ಕೃತಿ, ಜೀವನ ಮೌಲ್ಯ. ದೇಶದ ಸತ್ವ ಮತ್ತು ತತ್ವ, ದೇಶದ ಅಸ್ಮಿತೆ. ರಾಮಾಯಣ ಪಾರಾಯಣದ ಮೂಲಕ ಶ್ರೀರಾಮನನ್ನು ಅಧ್ಯಯನ ಮಾಡಬೇಕು. ಯುವಜನತೆಗೆ ರಾಮಾಯಣದ ಬಗ್ಗೆ ಜ್ಞಾನ ಇರಬೇಕು. ರಾಮನನ್ನು ತಿಳಿಯುವುದು ಅಂದರೆ ನಮ್ಮ ನಾಗರಿಕತೆಯನ್ನು ತಿಳಿಯುವುದು ಎಂದರ್ಥ ಎಂದರು.
ಭಕ್ತಿ ರಾಷ್ಟ್ರಶಕ್ತಿಯಾಗಿದೆ. ಸುಭಾಷಿತಗಳು ಕೇವಲ ವಾಕ್ಯವಲ್ಲ. ಜೀವನದ ಏರಿಳಿತವನ್ನು ಎದುರಿಸುವ ಸಾಮರ್ಥ್ಯ ಇದರಿಂದ ಸಿಗುತ್ತದೆ ಎಂದು ತಿಳಿಸಿದರು.
Related Articles
ರಾಮಾಯಣ, ಮಹಾಭಾರತ ಎರಡು ಕಣ್ಣುಗಳು. ಅವುಗಳಿಗೆ ಎಂದೂ ಸಾವಿಲ್ಲ.ಇತ್ತೀಚಿನ ದಿನಗಳಲ್ಲಿ ಈ ಗ್ರಂಥವನ್ನು ಕೆಲವರು ಮೂಲೆಗುಂಪು ಮಾಡುತ್ತಿರು ವುದು ಬೇಸರದ ಸಂಗತಿ. ರಾಮಾಯಣ, ಮಹಾಭಾರತ ಇತಿಹಾಸವೂ ಹೌದು, ಪುರಾಣವೂ ಹೌದು. ರಾಮಾಯಣ ಪಾರಾಯಣ, ವೇದ ಪಾರಾಯಣ ಭಿನ್ನವಲ್ಲ ಎಂದರು.
Advertisement
ಸಂಸ್ಕೃತ ಭಾರತಿ ಪ್ರಾಂತ ಸಂಪರ್ಕ ಪ್ರಮುಖ್ ಸತ್ಯನಾರಾಯಣ ಕೆ.ವಿ. ಸ್ವಾಗತಿಸಿದರು. ವಿಭಾಗ ಸಂಯೋಜಕ ನಟೇಶ ವಂದಿಸಿದರು. ಡಾ| ಉಮಾಮಹೇಶ್ವರ ನಿರೂಪಿಸಿದರು.