Advertisement
ಪ್ರತಿ ದಿನವೂ ಆಗಮಿಸುವ ಭಕ್ತರನ್ನು ಸೂಕ್ತವಾಗಿ ನಿಭಾಯಿಸುವ ಜತೆಗೆ ಸರತಿಯಲ್ಲಿ ಭಕ್ತರನ್ನು ದೇವರ ದರ್ಶನಕ್ಕೆ ಯಾವ ರೀತಿ ಬಿಡಬೇಕು, ಸಾಲಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹೇಗೆ ಇರಬೇಕು ಎಂಬ ಬಗ್ಗೆ ತಂಡ ಸಲಹೆ ನೀಡಿದೆ. ಟಿಟಿಡಿಯ ತಜ್ಞರ ತಂಡ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಪದಾಧಿಕಾರಿ ಗೋಪಾಲ್ ಜಿ ಜತೆಗೆ ಸಮಾಲೋಚನೆ ಮತ್ತು ಚರ್ಚೆಗಳನ್ನು ನಡೆಸಿದೆ.
17ರಂದು ನಡೆಯಲಿರುವ ಮೊದಲ ರಾಮ ನವಮಿಗೆ ಅಯೋಧ್ಯೆಯಲ್ಲಿ ಸಿದ್ಧತೆ ನಡೆದಿದೆ. ಆ ದಿನ ಸುಮಾರು 25 ಲಕ್ಷ ಮಂದಿ ಭಕ್ತರು ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.