Advertisement

ಸರಕಾರಿ ಆಸ್ಪತ್ರೆಗಳಲ್ಲಿ ಆಯುರ್ವೇದ ಔಷಧ-ಚಿಕಿತ್ಸೆಗೆ ಕ್ರಮ

11:30 AM Oct 18, 2017 | |

ಬೆಂಗಳೂರು: ಆಯುರ್ವೇದ ಮತ್ತು ಅಲೋಪತಿ ಎರಡು ವೈದ್ಯ ಪದ್ಧತಿಗಳನ್ನು ಒಗ್ಗೂಡಿಸುವ ಕೆಲಸ ಇಲಾಖೆ ಮಾಡಲಿದ್ದು, ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಆಯುರ್ವೇದ ಔಷಧ, ಚಿಕಿತ್ಸೆ ಕುರಿತು ಮಾಹಿತಿ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್‌. ರಮೇಶ್‌ಕುಮಾರ್‌ ತಿಳಿಸಿದರು.

Advertisement

ಆಯುಷ್‌ ಇಲಾಖೆಯಿಂದ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾ ಲಯದಲ್ಲಿ ಆಯೋಜಿಸಲಾಗಿದ್ದ ಆಯು ರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಮಂದಿ ಬಡ ರೋಗಿಗಳು ಇದ್ದಾರೆ. ಅಲೋಪತಿ ಪದ್ಧತಿ ಅನೇಕರಿಗೆ ಒಗ್ಗಿಕೊಳ್ಳುವುದಿಲ್ಲ. ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುತ್ತದೆ. ಹೀಗಾಗಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧ ಹೆಚ್ಚು ಸೂಕ್ತ. ವೆಚ್ಚವೂ ಕಡಿಮೆ. ಆದ್ದರಿಂದ ಆಯುರ್ವೇದಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next