Advertisement

Udupi ಪ್ರಸಾದ್‌ ನೇತ್ರಾಲಯಕ್ಕೆ “ಆಯುಷ್ಮಾನ್‌ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’

12:32 AM Aug 16, 2023 | Team Udayavani |

ಉಡುಪಿ: ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಕರ್ನಾಟಕ (ಎಬಿಪಿಎಂಜೆಎವೈ-ಎಆರ್‌ಕೆ) ಯೋಜನೆಯನ್ನು ಅನುಷ್ಠಾನ ಗೊಳಿಸುವಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ಅತ್ಯುತ್ತಮ ಕಾರ್ಯಕ್ಷಮತೆಯ ವಿವರ ಮತ್ತು ಯೋಜನೆಯ ಬಳಕೆಯಲ್ಲಿ ಅತ್ಯುತ್ತಮ ನಿರ್ವಹಣೆ ಸಾಧಿಸಿರುವುದನ್ನು ಪರಿಗಣಿಸಿ ಉಡುಪಿಯ ಸೂಪರ್‌ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಪ್ರಸಾದ್‌ ನೇತ್ರಾಲಯಕ್ಕೆ “ಆಯುಷ್ಮಾನ್‌ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’ ಲಭಿಸಿದೆ.

Advertisement

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಸ್ತಾಂತರಿಸಿದರು.

ಪ್ರಸಾದ್‌ ನೇತ್ರಾಲಯವು ಈ ವರ್ಷ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಉಡುಪಿ ಜಿಲ್ಲೆಯ ಏಕೈಕ ಆಸ್ಪತ್ರೆಯಾಗಿರುವುದಲ್ಲದೆ, ರಾಜ್ಯದ ಏಕೈಕ ಕಣ್ಣಿನ ಆಸ್ಪತ್ರೆಯಾಗಿ ಈ ಗೌರವಕ್ಕೆ ಪಾತ್ರವಾಗಿದೆ. ಪ್ರಸಾದ್‌ ನೇತ್ರಾಲಯದ ಪರವಾಗಿ ಹಿರಿಯ ನೇತ್ರತಜ್ಞ ಡಾ| ಸಚಿನ್‌ ಎಸ್‌. ಶೆಡೋಲೆ ಪ್ರಮಾಣಪತ್ರ ಸ್ವೀಕರಿಸಿದರು.

ಶಾಸಕ ಯಶ್‌ಪಾಲ್‌ ಎ. ಸುವರ್ಣ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಜಿಲ್ಲಾಆರೋಗ್ಯಾಧಿಕಾರಿ ಎಚ್‌. ನಾಗಭೂಷಣ ಉಡುಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next