Advertisement

ಆಯುಷ್ಮಾನ್‌ ಭಾರತ್‌ ಬಡವರ ಪಾಲಿನ ಸಂಜೀವಿನಿ: ನಾಗೇಶ್‌

03:14 PM Sep 27, 2019 | Suhan S |

ಆನೇಕಲ್‌: ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯು ಬಡವರ ಪಾಲಿನ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗುಡ್ಡಹಟ್ಟಿ ನಾಗೇಶ್‌ ರೆಡ್ಡಿ ತಿಳಿಸಿದರು. ತಾಲೂಕಿನ ನೆರಳೂರು ಗ್ರಾಮದಲ್ಲಿ ಅರ್ಹ ಪಲಾನುಭಗಳಿಗೆ ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯಆರೋಗ್ಯ ಕಾರ್ಡ್ ಗಳನ್ನು ವಿತರಿಸಿ ಮಾತನಾಡಿದರು.

Advertisement

ಈ ಯೋಜನೆಯಲ್ಲಿ ಪ್ರತಿ ವರ್ಷ ಬಿಪಿಎಲ್‌ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್‌ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್‌ ದರದಲ್ಲಿ ಶೇ 30 ರಷ್ಟು ವೆಚ್ಚ ಲಭ್ಯವಿದೆ ಎಂದರು. ಈ ಯೋಜನೆಯಲ್ಲಿ ಕಾರ್ಡ್‌ ಪಡೆದರು ನಿಗದಿತಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬಹುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ನೆರಳೂರು ಮಲ್ಲಿಕಾರ್ಜುನ್‌, ನೆರಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶಶಿ ಮತ್ತಿತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next