Advertisement

ನಾನು 3 ಲಕ್ಷ ಲೀಡ್‌ನ‌ಲ್ಲಿ ಗೆಲ್ಲದಿದ್ದರೆ ಚುನಾವಣಾ ಪ್ರಕ್ರಿಯೆ ಸರಿಯಿಲ್ಲವೆಂದರ್ಥ

07:06 AM May 23, 2019 | Vishnu Das |

ರಾಮ್‌ಪುರ್‌ :ವಿಪಕ್ಷಗಳು ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸಿದ ಬೆನ್ನಲ್ಲೇ ಎಸ್‌ಪಿ ನಾಯಕ, ಅಭ್ಯರ್ಥಿ ಅಜಂ ಖಾನ್‌ ಅವರು ನಾನು 3 ಲಕ್ಷ ಮತಗಳ ಅಂತರದಿಂದ ಗೆಲ್ಲದೇ ಹೋದಲ್ಲಿ ಚುನಾವಣಾ ಪ್ರಕ್ರಿಯೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ ಎನ್ನುವುದು ಖಚಿತವಾಗುತ್ತದೆ ಎಂದು ಹೊಸ ಲೆಕ್ಕಾಚಾರ ಮುಂದಿಟ್ಟಿದ್ದಾರೆ.

Advertisement

ಅಜಂ ಖಾನ್‌ ಅವರು ರಾಮ್‌ಪುರ್‌ನಲ್ಲಿ ಬಿಜೆಪಿ ಅಭ್ಯರ್ಥಿ, ಖ್ಯಾತ ನಟಿ ಜಯಪ್ರದಾ ಅವರ ವಿರುದ್ಧ ಕಣಕ್ಕಿಳಿದಿದ್ದಾರೆ.

ಹಲವು ವಿವಾದಾತ್ಮಕ ಹೇಳಿಕೆಗಳು ಮತ್ತು ನಟಿ ಜಯಪ್ರದಾ ಅವರ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ಪ್ರಚಾರ ನಡೆಸದಂತೆ 2 ಬಾರಿ ನಿಷೇಧಕ್ಕೆ ಗುರಿಯಾಗಿದ್ದರು.

ಜಯಪ್ರದಾ ಅವರು ಎಸ್‌ಪಿ ತೊರೆದು ಬಿಜೆಪಿ ಸೇರ್ಪಡೆಯಾಗಿ ಕಣಕ್ಕಿಳಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next