Advertisement

ಮನೆ ಬದಲಾಯಿಸಿರಬಹುದು, ಆದರೆ ಮನಸ್ಸು ಬದಲಾಯಿಸೋಕಾಗಲ್ಲ: ಬಿ.ಸಿ ಪಾಟೀಲ್

09:51 AM Dec 14, 2019 | keerthan |

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೃದಯದ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನೂತನ ಬಿಜೆಪಿ ಶಾಸಕ ಬಿ.ಸಿ ಪಾಟೀಲ್ ಆರೋಗ್ಯ ವಿಚಾರಿಸಿದರು.

Advertisement

ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ಪಕ್ಷ ಬದಲಾಯಿಸಿದ್ದೇವೆ, ಆದರೆ ಮಾನವೀಯತೆಯನ್ನು ಮನುಷ್ಯತ್ವವನ್ನು ಮರೆಯೋಕಾಗಲ್ಲ ಎಂದರು.

ಮನೆ ಬದಲಾಯಿಸಿರಬಹುದು, ಆದರೆ ಮನಸ್ಸು ಬದಲಾಯಿಸೋಕಾಗಲ್ಲ. ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ. ಹೀಗಾಗಿ ನಮ್ಮ ಮಾಜಿ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ ಯಾವುದೇ ರಾಜಕೀಯ ಮಾತಾಡೋಕಾಗಿಲ್ಲಎಂದು ಸಿದ್ದರಾಮಯ್ಯ ಭೇಟಿ ಬಳಿಕ ಬಿ ಸಿ ಪಾಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next