Advertisement

ನಿರುತ್ಸಾಹದ ಹೇಳಿಕೆ ನೀಡಬೇಡಿ : ಜಗ್ಗೇಶ್ ಗೆ ಬಿ ಸಿ ಪಾಟೀಲ್ ಮನವಿ

07:21 PM Mar 31, 2021 | Team Udayavani |

ಬೆಂಗಳೂರು :  ಚಿತ್ರರಂಗಕ್ಕೆ ಬರುವ ಯುವಕರನ್ನು, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕೇ ಹೊರತು ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವ ಬಿ ಸಿ ಪಾಟೀಲ್ ಜಗ್ಗೇಶ್ ಗೆ ಮನವಿ ಮಾಡಿಕೊಂಡಿದ್ದಾರೆ.

Advertisement

ಜಗ್ಗೇಶ್ ಅವರ “ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿರುವ ಬಿ ಸಿ ಪಾಟೀಲ್, ನೀವು ಹೀಗೆ ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ ಎಂದಿದ್ದಾರೆ.

Udayavani news, udayavani latest news, bc patil, jaggesh news,

Advertisement

 

ಜಗ್ಗೇಶ್ ಅವರೇ ದಯವಿಟ್ಟು ಇಂತಹ ನಿರುತ್ಸಾಹಗೊಳಿಸುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ನೀಡಬೇಡಿ. ನಾನೊಬ್ಬ ಪುಟ್ಟ ಕಲಾವಿದನಾಗಿ ನಿಮ್ಮೊಂದಿಗೆ ಬೆಳೆದವನಾದ್ದರಿಂದ ನಿಮಗೆ ಈ ವಿಷಯವನ್ನು ಗಮನಕ್ಕೆ ತರುತ್ತಿದ್ದೇನೆ. ನಮ್ಮ ನಿಮ್ಮ ಮಕ್ಕಳು ಸಹ ಚಿತ್ರರಂಗಕ್ಕೆ ಬರಬೇಕು.

ಜಗ್ಗೇಶ್ ಅವರೇ, ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು ಎಂದು ಟ್ವೀಟ್ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next