Advertisement

ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ, ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕು:ಬಿ.ಸಿ.ಪಾಟೀಲ್

12:06 PM Jun 14, 2021 | keerthan |

ಬೆಂಗಳೂರು: ಒಂದು ಮನೆಯಲ್ಲಿ ಹತ್ತು ಮಕ್ಕಳು ಇರುತ್ತಾರೆ, ಹಾಗಂತ ಎಲ್ಲರನ್ನೂ ತೃಪ್ತಿ ಪಡಿಸುವುದು ಸಾಧ್ಯವಿಲ್ಲ ಎಂದು ಪಕ್ಷದೊಳಗಿನ ಅಸಮಾಧಾನದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.16 ರಂದು ಸಂಜೆ ಐದು ಗಂಟೆಗೆ ಸಭೆಯಿದೆ .ನೀವೆಲ್ಲರೂ ಬರಬೇಕೆಂದು ನಮ್ಮನ್ನು ಕರೆದಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗುತ್ತೋ ಗೊತ್ತಿಲ್ಲ ಎಂದರು.

ಸಿಎಂ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಎರಡು ವರ್ಷ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ. ಇದನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ ಕಟೀಲ್ ಸ್ಪಷ್ಟಪಡಿಸಿದ್ದಾರೆ ಎಂದರು.

ಇದನ್ನೂ ಓದಿ:ನಟ ಸಂಚಾರಿ ವಿಜಯ್‌ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ‌ ಅಶ್ವತ್ಥನಾರಾಯಣ

ಕೆಲವು ಸಚಿವರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು. ನಾನು ಅಂತ ಅಲ್ಲ, ದೊಡ್ಡವರು ಯಾರೂ ಇಲ್ಲ. ಎಲ್ಲರೂ ಪಕ್ಷದ ತೀರ್ಮಾನಕ್ಕೆ  ಬದ್ದರಾಗಿರಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next