Advertisement

ರಸಗೊಬ್ಬರ ಕುರಿತಂತೆ ಕೇಂದ್ರ ಸರ್ಕಾರದಿಂದ ಐತಿಹಾಸಿಕ ತೀರ್ಮಾನ: ಬಿ.ಸಿ.ಪಾಟೀಲ್

12:17 PM May 20, 2021 | Team Udayavani |

ಬೆಂಗಳೂರು: ರಸಗೊಬ್ಬರವನ್ನು ಮೊದಲಿನ ದರದಲ್ಲಿ ನೀಡುತ್ತಿದ್ದು, ಪ್ರಧಾನಿ ನರೆಂದ್ರ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು  ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ. ಕೃಷಿಕರಿಗೆ, ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ. ಸಂಕಷ್ಟದ ಈ ಪ್ಯಾಕೇಜ್ ಅನ್ನು ಸ್ವಾಗತಿಸುವುದಾಗಿ ಹೇಳಿದರು.

ಇದನ್ನೂ ಓದಿ:ಮನೆಯಿಂದ ಹೊರ ಬರುವ ಮುನ್ನ ಎಚ್ಚರ: ಬಿಗಿ ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇರುವ ಬಗ್ಗೆ  ಸಿಎಂ ಭೇಟಿಯಾಗಿ ಮನವಿ‌ ಸಲ್ಲಿಸಿ 300 ಬೆಡ್ ಹೆಚ್ಚಳ, ಆಕ್ಸಿಜನ್ ಹಾಗೂ ಕಂಟೈನರ್ ಗೆ ಕೇಳಿದ್ದೇವೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ 623 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಕರ್ಪ್ಯೂ ವಿಸ್ತರಣೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next