Advertisement

ಬಿ.ಸಿ.ರೋಡ್ ಯುವಕನ ಕೊಲೆಯತ್ನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

04:47 PM May 02, 2021 | Team Udayavani |

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಕ್ರಾಸ್ ಎಂಬಲ್ಲಿ ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಎಂಬಾತನ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಲಾಗಿದೆ.

Advertisement

ಮಹಮ್ಮದ್ ಇಮ್ರಾನ್ (38 ವ) ಮತ್ತು ಮಹಮ್ಮದ್ ಸಫ್ವಾನ್ (21 ವ) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ನಂದಿಗ್ರಾಮದಲ್ಲಿ ಗೆಲುವಿನ ನಗೆ ಬೀರಿದ ದೀದಿ: ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಅಂತರದ ಜಯ

ಎಪ್ರಿಲ್ ನಾಲ್ಕರಂದು ರಾತ್ರಿ 7.30ರ ಸುಮಾರಿಗೆ ಸ್ಕೂಟರ್ ನಲ್ಲಿ ಬಂದ ಆರೋಪಿಗಳು ಮಾರಾಕಾಯುಧದಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವೆಲೈಂಟೈನ್ ಡಿಸೋಜಾ ರವರ ನೇತ್ರತ್ವದ ವಿಶೇಷ ತಂಡವನ್ನು ರಚಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next