Advertisement

ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ

09:51 PM Apr 30, 2022 | Team Udayavani |

ಬೆಂಗಳೂರು: ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ಬಿ.ಜೆ.ಪುಟ್ಟಸ್ವಾಮಿ ಅವರು ಶನಿವಾರ ರಾಜೇನಾಮೆ
ಸಲ್ಲಿಸಿದ್ದಾರೆ.

Advertisement

ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ರಾಜೀನಾಮೆ ಪಾತ್ರ ಸಲ್ಲಿಸಿದ್ದು, ತನ್ನ ೫೦ ವರ್ಷದ ರಾಜಕೀಯ ಲೌಕಿಕ ಜೀವನದಿಂದ ಆಧ್ಯಾತ್ಮಿಕ ಜೀವನಕ್ಕೆ ದೈವ ಕೃಪೆ ಯಿಂದ ಹೋಗುತ್ತಿದ್ದೇನೆ ಎಂದು ಬರೆದಿದ್ದಾರೆ.

ಮಾಜಿ ಸಚಿವರಾಗಿದ್ದ ಪುಟ್ಟಸ್ವಾಮಿ ಅವರು ಸದ್ಯದಲ್ಲೇ ಸ್ವಾಮೀಜಿಗಳಾಗಲಿದ್ದಾರೆ. ಮೇ 6ರಂದು ಸನ್ಯಾಸ ದೀಕ್ಷೆ ಪಡೆಯಲಿರುವ ಬಿ.ಜೆ. ಪುಟ್ಟಸ್ವಾಮಿ ಅವರು, ಬೆಂಗಳೂರಿನ ಮಾದನಾಯ್ಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಿ ಅಲಂಕೃತಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next