Advertisement

ಬೆಡ್ ಬ್ಲಾಕಿಂಗ್ ಹಗರಣ: ನ್ಯಾಯಾಂಗ ತನಿಖೆಗೆ ಬಿ.ಎಂ.ಫಾರೂಖ್ ಒತ್ತಾಯ

08:59 AM May 07, 2021 | keerthan |

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ  ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಾಮೂರ್ತಿಯವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಜೆಡಿಎಸ್ ನಾಯಕ, ಎಂಎಲ್ ಸಿ ಬಿ.ಎಂ.ಫಾರೂಖ್ ಒತ್ತಾಯಿಸಿದ್ದಾರೆ.

Advertisement

ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಮ್ ನಲ್ಲಿ ಬುಧವಾರ ರಾತ್ರಿಯೂ ಬೆಡ್ ಬುಕಿಂಗ್ ನಡೆದಿರುವ ಬಗ್ಗೆ ಸಾಕ್ಷ್ಯಗಳಿವೆ. ಈ ಹಿನ್ನಲೆಯಲ್ಲಿ ಇಲ್ಲಿನ ವಾರ್ ರೂಮ್ ನ ಎಲ್ಲಾ ಸಿಬ್ಬಂದಿಯನ್ನು ವಜಾ ಮಾಡಬೇಕು. ತನಿಖೆಯ ಬಳಿಕ ಸಿಬ್ಬಂದಿ ತಪ್ಪಿತಸ್ಥರಲ್ಲ ಎಂದು ಸಾಬೀತಾದರೆ ಅವರನ್ನು ಬಿಬಿಎಂಪಿ ಮರುನೇಮಕ ಮಾಡಲಿ ಎಂದು ಫಾರೂಕ್ ಒತ್ತಾಯಿಸಿದರು.

ಇದನ್ನೂ ಓದಿ:“ಸಾಮಾಜಿಕ ಹೊಣೆಗಾರಿಕೆ’ ಪ್ರದರ್ಶಿಸಿದ ಕರಾವಳಿಯ ಕೈಗಾರಿಕೆಗಳು

ಕೋವಿಡ್ ಆಸ್ಪತ್ರೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. 12ಕ್ಕೂ ಹೆಚ್ಚು ಆಸ್ಪತ್ರೆಗಳು ಇದರಲ್ಲಿ ಶಾಮೀಲಾಗಿವೆ. ಸರ್ಕಾರ ಈ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next