Advertisement

ಬಿ.ಎಸ್.ಎನ್.ಎಲ್. ಉದ್ಯೋಗಿ ನೇಣಿಗೆ ಶರಣು

09:40 PM Apr 20, 2021 | Team Udayavani |

ಚಿಕ್ಕಬಳ್ಳಾಪುರ: ಸಾಲಗಾರರ ಕಾಟ ತಾಳತಾರದೆ ಬಿ.ಎಸ್.ಎನ್.ಎಲ್. ಉದ್ಯೋಗಿಯೊಬ್ಬ ಡೆತ್‍ನೋತ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ದಿಬ್ಬೂರಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ಆಟಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಕೃಷ್ಣರೆಡ್ಡಿ(59) ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯೋಗಿ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆಟಗೊಲ್ಲಹಳ್ಳಿಯ ಕೃಷ್ಣರೆಡ್ಡಿ ಬೆಂಗಳೂರಿನ ಬಿ.ಎಸ್.ಎನ್.ಎಲ್ ಕಚೇರಿಯಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದು ,ಈತ ಸಾಲ ಪಡೆದುಕೊಂಡು ಬಡಾವಣೆಗಳನ್ನು ನಿರ್ಮಿಸಿ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಡಾವಣೆಯಲ್ಲಿ ಮನೆಗಳನ್ನು ಖರೀದಿ ಮಾಡಿದವರು ಸಕಾಲದಲ್ಲಿ ಹಣಪಾವತಿಸದೆ ತೊಂದರೆ ನೀಡಿದ್ದರಿಂದ ಸಾಲಗಾರರು ಹಣವನ್ನು ಪಾವತಿಸಲು ಕಿರುಕುಳ ನೀಡುತ್ತಿದ್ದರಿಂದ ಮನನೊಂದ ಕೃಷ್ಣರೆಡ್ಡಿ ಸ್ವಗ್ರಾಮಕ್ಕೆ ಬಂದು ಡೆತ್‍ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ದಿಬ್ಬೂರಹಳ್ಳಿ ಪೋಲಿಸ್ ಠಾಣೆಯ ಪಿಎಸ್‍ಐ ರಂಜನ್‍ಕುಮಾರ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಪತ್ನಿ,ಇಬ್ಬರು ಪುತ್ರಿಯರು ಹಾಗೂ ಒರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಮೃತ ಕೃಷ್ಣರೆಡ್ಡಿ ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next