Advertisement

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

08:38 PM Jun 19, 2021 | Team Udayavani |

ಬೆಂಗಳೂರು : ಕೋವಿಡ್  ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.

Advertisement

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ  ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಬಿ ಎಸ್ ವೈ ಹೇಳಿದ ಪ್ರಮುಖ ಅಂಶಗಳು :

  • ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
  • ಮೆಟ್ರೋ ಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
  • ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
  • ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ಗಳನ್ನು ತೆರೆಯಲು ಅವಕಾಶ
  • ಮಾಲ್ ಗಳು ತೆರೆಯಲು ಅವಕಾಶವಿಲ್ಲ
  • ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶ
  • ಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ
  • ಹೋಟೇಲ್ ಗಳಲ್ಲಿ ಶೇಕಡಾ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಪಾಸಿಟಿವಿಟಿ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ
  • ಬಸ್ ಸಂಚಾರಕ್ಕೆ ಅವಕಾಶ
  • ಬಸ್ ಗಳಲ್ಲಿ ಶೇಕಡಾ. 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
  • ಸಿನೆಮಾ ಮಂದಿರ ಹಾಗೂ ದೇವಾಲಯಗಳಲ್ಲಿ ನಿರ್ಬಂಧ ಮುಂದುವರಿಕೆ
  • ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ ಲಾಕ್ ಘೋಷಣೆ ಮಾಡಲಾಗಿದೆ.
  • ಉಳಿದ 13 ಜಿಲ್ಲೆಗಳಲ್ಲಿ  ಹಾಲಿ ನಿರ್ಬಂಧಗಳು ಮುಂದುವರಿಕೆ
  • ಶಾಪಿಂಗ್ ಕಾಂಪ್ಲೆಕ್ಸ್ ಗಳು ಮುಂದಿನ ಆದೇಶದ ತನಕ ತೆರೆಯುವಂತಿಲ್ಲ
  • ಮಂದಿರ, ಚರ್ಚ್, ಮಸೀದಿಗಳು ತೆರೆಯುವುದಕ್ಕೆ ಅವಕಾಶವಿಲ್ಲ
  • ಸೋಮವಾರದಿಂದ ಬಟ್ಟೆ ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯ ತನಕ ತೆರೆಯಲು ಅವಕಾಶ
  • ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ 13 ಜಿಲ್ಲೆಗಳಲ್ಲಿ ಈ ಹಿಂದಿನ ನಿರ್ಬಂಧಗಳು ಮುಂದುವರಿಕೆ
  • ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯ.
  • ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ
  • ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಕೆ

ರಾಜ್ಯವ್ಯಾಪಿ ಅನ್ವಯವಾಗುವಂತೆ :

Advertisement

•  ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಪ್ರತಿ ದಿನ ನೈಟ್‌ ಕರ್ಫ್ಯೂ .
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿ.
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ.

Advertisement

Udayavani is now on Telegram. Click here to join our channel and stay updated with the latest news.

Next