Advertisement

ರಾಜ್ಯದ ಪ್ರವಾಹ ನಿರಾಶ್ರಿತರ ಮೊದಲ  ಮನೆ ನಿರ್ಮಾಣಕ್ಕೆ ಸಿಎಂ ಅಡಿಗಲ್ಲು

12:02 PM Oct 05, 2019 | keerthan |

ಬೆಳಗಾವಿ: ಪ್ರವಾಹ ಸಂತ್ರಸ್ತರಿಗೆ ಕೊನೆಗೂ ಧಾವಿಸಿರುವ ರಾಜ್ಯ ಸರ್ಕಾರ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂ.‌ ಜಮಾ ಮಾಡುತ್ತಿದ್ದಂತೆ, ಮುಖ್ಯಮಂತ್ರಿಗಳು ರಾಜ್ಯದ ಮೊದಲ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸುವ ಮೂಲಕ ಚಾಲನೆ ನೀಡಿದರು.

Advertisement

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಅನೇಕ ಮನೆಗಳು ಧರೆಗುರುಳಿದ್ದು, ಸಂಪೂರ್ಣ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಐದು ಲಕ್ಷ ರೂ. ಬಿಡುಗಡೆ ಮಾಡಿದೆ.‌ ಈ ಹಿನ್ನೆಲೆಯಲ್ಲಿ ಮೊದಲ ಕಂತು ಒಂದು ಲಕ್ಷ ರೂ. ಬಂದಿದ್ದು, ನಗರದ ಮಹಾದ್ವಾರ ರಸ್ತೆಯಲ್ಲಿ ಇರುವ ವಿನೋದ ಭಾಗವತ್ ಎಂಬವರ ಮನೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದರು.

ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕ್ಷೇತ್ರದಲ್ಲಿ ಈ ಮನೆ ನಿರ್ಮಾಣ ಆಗುತ್ತಿದೆ. ಈಗ ಮುಖ್ಯಮಂತ್ರಿಗಳು ಶುಕ್ರವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.

ಗುದ್ದಲಿ ಪೂಜೆ ಮಾಡಿದ ಸಿಎಂ ಯಡಿಯೂರಪ್ಪ ಅವರು ನೆರೆ ಸಂತ್ರಸ್ತರಿಗೆ ಒಂದು ಲಕ್ಷ ಹಣ ನೀಡಿ ಮನೆ ಕಟ್ಟಿಕೊಳ್ಳಲು ಅನುವು ಮಾಡಿ ಕೊಟ್ಟಿದ್ದಾರೆ.‌ ನಿನ್ನೆಯಷ್ಟೇ ನಿರಾಶ್ರಿತರ ಅಕೌಂಟ್ ಗೆ ಒಂದು ಲಕ್ಷ ಪರಿಹಾರ ಅಕೌಂಟ್ ಗೆ ಜಿಲ್ಲಾಡಳಿತ ಹಾಕಿತ್ತು. ಈ ಹಿನ್ನಲೆಯಲ್ಲಿ ಇಂದು ನಿರಾಶ್ರಿತರ ಮನೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next